Webdunia - Bharat's app for daily news and videos

Install App

ಪ್ರಪಾತಕ್ಕುರಳಿದ್ದ ವ್ಯಕ್ತಿ ಕ್ರಿಕೆಟಿಗ ಮೊಹಮ್ಮದ್ ಶಮಿ ಕಣ್ಣಿಗೆ ಬಿದ್ದಿದ್ದು ಹೇಗೆ?

Webdunia
ಸೋಮವಾರ, 27 ನವೆಂಬರ್ 2023 (09:00 IST)
ನವದೆಹಲಿ: ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಹೀರೋ ಆಗಿದ್ದ ಕ್ರಿಕೆಟಿಗ ಮೊಹಮ್ಮದ್ ಶಮಿ ಇದೀಗ ಜೀವನದಲ್ಲೂ ಒಬ್ಬರ ಜೀವವುಳಿಸಿ ಹೀರೋ ಆಗಿದ್ದಾರೆ.

ನಾನಿತಾಲ್ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಪ್ರಪಾತಕ್ಕೆ ಬಿದ್ದ ಕಾರಿನಲ್ಲಿ ಸಿಲುಕಿಕೊಂಡ ವ್ಯಕ್ತಿಯನ್ನು ಮೊಹಮ್ಮದ್ ಶಮಿ ಮತ್ತು ಗೆಳೆಯರು ರಕ್ಷಿಸಿದ್ದಾರೆ. ಈ ವಿಡಿಯೋವನ್ನು ಸ್ವತಃ ಅವರೇ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿದ್ದರು.

ಮೊಹಮ್ಮದ್ ಶಮಿಯ ಈ ಮಾನವೀಯತೆಯ ಗುಣಕ್ಕೆ ನೆಟ್ಟಿಗರು ಫಿದಾ ಆಗಿದ್ದು, ಒಬ್ಬರ ಜೀವವುಳಿಸಿದ್ದಕ್ಕೆ ಅಭಿನಂದಿಸುತ್ತಿದ್ದಾರೆ. ಅಷ್ಟಕ್ಕೂ ಶಮಿಗೆ ಪ್ರಪಾತಕ್ಕೆ ಬಿದ್ದಿದ್ದ ವ್ಯಕ್ತಿ ಕಣ್ಣಿಗೆ ಬಿದ್ದಿದ್ದು ಹೇಗೆ ಗೊತ್ತಾ?

ಅಪಘಾತಕ್ಕೀಡಾದ ವ್ಯಕ್ತಿಯ ಕಾರು ಮೊಹಮ್ಮದ್ ಶಮಿಯ ಕಾರಿನ ಮುಂದೆಯೇ ಚಲಿಸುತ್ತಿತ್ತು. ಆದರೆ ಗುಡ್ಡಗಾಡು ಪ್ರದೇಶದಲ್ಲಿ ಕಾರು ನಿಯಂತ್ರಣಕ್ಕೆ ಸಿಗದೇ ಪ್ರಪಾತಕ್ಕುರುಳಿದೆ. ತಮ್ಮ ಕಣ್ಣೆದುರೇ ಈ ಘಟನೆ ನಡೆದಿದ್ದು ಶಮಿ ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿದ್ದ ವ್ಯಕ್ತಿಗೆ ಗಂಭೀರ ಗಾಯವಾಗಿರಲಿಲ್ಲ. ಹೀಗಾಗಿ ತಾವೇ ಖುದ್ದಾಗಿ ಪ್ರಥಮ ಚಿಕಿತ್ಸೆ ಮಾಡಿ ಆತನನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಅವರ ಈ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

ಮುಂದಿನ ಸುದ್ದಿ
Show comments