Webdunia - Bharat's app for daily news and videos

Install App

ಧೋನಿಯೊಳಗಿನ ನಾಯಕತ್ವದ ಸಾಮರ್ಥ್ಯವನ್ನು ಸಚಿನ್ ಪತ್ತೆ ಹಚ್ಚಿದ್ದು ಹೇಗೆ ಗೊತ್ತಾ?!

Webdunia
ಶುಕ್ರವಾರ, 11 ಮೇ 2018 (09:28 IST)
ಮುಂಬೈ: ಭಾರತ ಕ್ರಿಕೆಟ್ ಕಂಡ ಶ್ರೇಷ್ಠ ನಾಯಕ ಯಾರು ಎಂಬ ಪ್ರಶ್ನೆ ಕೇಳಿದರೆ ಎಲ್ಲರೂ ಮೊದಲು ಹೇಳುವುದು ಧೋನಿ ಹೆಸರನ್ನು. ಆದರೆ ಧೋನಿ ನಾಯಕನಾಗಿ ಆಯ್ಕೆಯಾಗಲು ಪ್ರಮುಖ ಕಾರಣ ಸಚಿನ್ ತೆಂಡುಲ್ಕರ್.

ಟಿ20 ವಿಶ್ವಕಪ್ ಗೆ ಧೋನಿ ಹೆಸರನ್ನು ನಾಯಕತ್ವಕ್ಕೆ ಸೂಚಿಸಿದ್ದು ಸಚಿನ್ ತೆಂಡುಲ್ಕರ್ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಧೋನಿಯಲ್ಲಿ ನಾಯಕತ್ವದ ಗುಣವಿದೆ ಎಂದು ಸಚಿನ್ ಗೆ ಅರಿವಾಗಿದ್ದು ಹೇಗೆ ಗೊತ್ತಾ?

ಬ್ರೇಕ್ ಫಾಸ್ಟ್ ವಿತ್ ಚಾಂಪಿಯನ್ಸ್ ಎಂಬ ಸಂದರ್ಶನ ಕಾರ್ಯಕ್ರಮದಲ್ಲಿ ಸಚಿನ್ ಈ ರಹಸ್ಯ ಬಹಿರಂಗಪಡಿಸಿದ್ದಾರೆ. ‘ನಾವಿಬ್ಬರೂ ಜತೆಯಾಗಿ ಆಡುತ್ತಿದ್ದಾಗ ನಾನು ಸ್ಲಿಪ್ ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದೆ. ಧೋನಿ ವಿಕಟ್ ಕೀಪರ್ ಆಗಿರುತ್ತಿದ್ದರು.

ಈ ಸಂದರ್ಭದಲ್ಲಿ ನಾನು ಫೀಲ್ಡಿಂಗ್ ಸೆಟ್ ಮಾಡುವ ಬಗ್ಗೆ ಧೋನಿ ಜತೆ ಚರ್ಚೆ ನಡೆಸುತ್ತಿದ್ದೆ. ನಾನು ನನ್ನ ಅಭಿಪ್ರಾಯ ಹೇಳಿದರೆ, ಧೋನಿ ಅವರದ್ದೇ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು. ಈ ವೇಳೆಯೇ ಅವರಲ್ಲಿ ನಾಯಕತ್ವದ ಗುಣ ಗಮನಿಸಿದೆ’ ಎಂದು ಸಚಿನ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

ವಿಚ್ಛೇದನ ಪಡೆದ ಬೆನ್ನಲ್ಲೇ ಯಜುವೇಂದ್ರ ಚಾಹಲ್ ಪ್ರತಿಭೆಯನ್ನು ಕೊಂಡಾಡಿದ ಆಪ್ತ ಗೆಳತಿ ಆರ್‌ಜೆ ಮಹ್ವಾಶ

IPL 2025: ತವರಿನಲ್ಲಿ ಕಡಿಮೆ ರನ್‌ ಮಾಡಿಯೂ ಗೆದ್ದುಬೀಗಿದ ಪಂಜಾಬ್‌ ಕಿಂಗ್ಸ್‌: ಕೋಲ್ಕತ್ತಕ್ಕೆ ಭಾರೀ ಮುಖಭಂಗ

IPL 2025: ತವರಿನ ಪ್ರೇಕ್ಷಕರ ಮುಂದೆ ಪರದಾಡಿದ ಪಂಜಾಬ್‌ ಬ್ಯಾಟರ್‌ಗಳು: ಕೆಕೆಆರ್‌ ಬೌಲರ್‌ಗಳ ಕರಾಮತ್ತು

Glenn Maxwell: ಮ್ಯಾಕ್ಸ್ ವೆಲ್ ರನ್ನು ಹರಾಜಿನಲ್ಲಿ ಕೈ ಬಿಟ್ಟಿದ್ದಕ್ಕೇ ಬಚಾವ್ ಎಂದ ಆರ್ ಸಿಬಿ ಫ್ಯಾನ್ಸ್

ಮುಂದಿನ ಸುದ್ದಿ
Show comments