Webdunia - Bharat's app for daily news and videos

Install App

ಚೆಂಡಿನ ಹೊಳಪಿಗೆ ಜೊಲ್ಲು ರಸ ಬಳಿಕೆ ಬ್ಯಾನ್ ಮಾಡಿದ್ದರ ಬಗ್ಗೆ ಬೌಲರ್ ಗಳ ಪ್ರತಿಕ್ರಿಯೆ ಏನು?

Webdunia
ಭಾನುವಾರ, 24 ಮೇ 2020 (09:17 IST)
ದುಬೈ: ಕೊರೋನಾ ಭೀತಿಯ ಹಿನ್ನಲೆಯಲ್ಲಿ ಇನ್ನು ಮುಂದಿನ ದಿನಗಳಲ್ಲಿ ಕ್ರಿಕೆಟ್ ನಲ್ಲಿ ಚೆಂಡು ಹೊಳಪು ಮೂಡಿಸಲು ಜೊಲ್ಲು ರಸ ಬಳಸುವುದನ್ನು ಐಸಿಸಿ ನಿಷೇಧಿಸಿದೆ. ಇದರ ಬಗ್ಗೆ ಬೌಲರ್ ಗಳ ಪ್ರತಿಕ್ರಿಯೆ ಏನು ಗೊತ್ತಾ?

 

ಚೆಂಡು ಹಳೆಯದಾದಂತೆ ಅದಕ್ಕೆ ಹೊಳಪು ಮೂಡಿಸಲು ಜೊಲ್ಲು ರಸ ಬಳಸುವುದು ಪರಿಣಾಮಕಾರಿ. ಬೌಲರ್ ಗಳಿಗೆ ಇದು ಅಭ್ಯಾಸವಾಗಿಬಿಟ್ಟಿದೆ. ಹೀಗಾಗಿ ಇದ್ದಕ್ಕಿದ್ದಂತೆ ನಿಷೇಧಿಸಿದರೆ ಈ ಅಭ್ಯಾಸವನ್ನು ರಾತ್ರಿ ಕಳೆದು ಹಗಲು ಬರುವುದರೊಳಗೆ ಬದಲಾಯಿಸಲು ಸಾಧ‍್ಯವಿಲ್ಲ ಎಂದು ಮಾಜಿ ವೇಗಿ ಬ್ರೆಟ್ ಲೀ ಹೇಳಿಕೊಂಡಿದ್ದಾರೆ. ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕೂಡಾ ಹೆಚ್ಚು ಕಡಿಮೆ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು, ಭಾರತದ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ಕೂಡಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಬಾಲ್ ಹಳೆಯದಾದಂತೆ ಬೆವರಿನಿಂದ ಹೊಳಪು ಮೂಡಿಸಲು ಸಾಧ‍್ಯವಿಲ್ಲ. ಅದರಿಂದ ಬಾಲ್ ಮತ್ತಷ್ಟು ಗಡುಸಾಗಬಹುದಷ್ಟೇ. ಬೆವರಿನಿಂದ ಬಾಲ್ ಒದ್ದೆಯಾಗಬಹುದು ಆದರೆ ಹೊಳಪು ಬರಲ್ಲ ಎಂದಿದ್ದಾರೆ. ವೇಗಿ ಇಶಾಂತ್ ಶರ್ಮಾ ಕೂಡಾ ಹೀಗೇ ಹೇಳಿದ್ದಾರೆ. ಜೊಲ್ಲು ಇಲ್ಲದೇ ಬಾಲ್ ಶೈನ್ ಆಗಲ್ಲ ಎನ್ನುವುದು ಅವರ ಅಭಿಪ್ರಾಯ. ಒಟ್ಟಿನಲ್ಲಿ ಬೌಲರ್ ಗಳಿಗೆ ಈಗ ಹೊಸ ಪದ್ಧತಿಗೆ ಅಡ್ಜಸ್ಟ್ ಆಗುವುದು ಕಷ್ಟವಾಗಲಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments