Select Your Language

Notifications

webdunia
webdunia
webdunia
webdunia

ಭಾರತ ಮತ್ತೊಮ್ಮೆ ವಿಶ್ವಕಪ್ ಗೆಲ್ಲುವ ವಿಶ್ವಾಸವಿದೆ: ಯುವರಾಜ್ ಸಿಂಗ್

ಭಾರತ ಮತ್ತೊಮ್ಮೆ ವಿಶ್ವಕಪ್ ಗೆಲ್ಲುವ ವಿಶ್ವಾಸವಿದೆ: ಯುವರಾಜ್ ಸಿಂಗ್
ಗ್ವಾಲಿಯರ್ , ಮಂಗಳವಾರ, 17 ಮಾರ್ಚ್ 2015 (16:36 IST)
ಮಹೇಂದ್ರ ಸಿಂಗ್ ಧೋನಿ ಉತ್ತಮ ನಾಯಕತ್ವ ಮತ್ತು ತಂಡದ ಆಟದಾರರು ತೋರುತ್ತಿರುವ ಉತ್ತಮ ಪ್ರದರ್ಶನ ನೋಡಿದಲ್ಲಿ ಭಾರತ ತಂಡ ಮತ್ತೆ ವಿಶ್ವಕಪ್ ಗೆಲ್ಲುವ ವಿಶ್ವಾಸವಿದೆ ಎಂದು ಆಲ್ ರೌಂಡ್ ಆಟಗಾರ ಯುವರಾಜ್ ಸಿಂಗ್ ಹೇಳಿದ್ದಾರೆ.

ವಿಶ್ವಕಪ್‌ನ ಎಲ್ಲಾ ಲೀಗ್ ಪಂದ್ಯಗಳಲ್ಲಿ ಟೀಂ ಇಂಡಿಯಾ ತಂಡ ಅತ್ಯುತ್ತಮ ಪ್ರದರ್ಶನ ನೀಡಿದೆ. ಉತ್ತಮ ಪ್ರದರ್ಶನ ಮುಂದುವರಿದಲ್ಲಿ ಖಂಡಿತವಾಗಿಯೂ ತಂಡ ವಿಶ್ವಕಪ್ ತಮ್ಮದಾಗಿಸಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಪ್ರತಿಯೊಂದು ಪಂದ್ಯದಲ್ಲಿ ಧೋನಿಯವರ ತಂತ್ರಗಾರಿಕೆ ಯಶಸ್ವಿಯಾಗಿದೆ. ಕ್ವಾರ್ಟರ್‌ಫೈನಲ್ ಪಂದ್ಯದಲ್ಲೂ ತಂಡ ಉತ್ತಮ ಪ್ರದರ್ಶನ ನೀಡುವುದು ಖಚಿತ ಎಂದರು.

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯಿಬ್ ಅಖ್ತರ್ 150 ಕಿ.ಮೀ ವೇಗದಲ್ಲಿ ಬೌಲಿಂಗ್ ಎಸೆಯುತ್ತಿರುವಾಗ ಅದೊಂದು ಅದ್ಭುತ ಅನುಭವವಾಗಿತ್ತು ಎಂದು ಕ್ರಿಕೆಟಿಗ ಯುವರಾಜ್ ಸಿಂಗ್ ಹಳೆಯ ನೆನಪುಗಳನ್ನು ಮೆಲಕು ಹಾಕಿದ್ದಾರೆ.

Share this Story:

Follow Webdunia kannada