Webdunia - Bharat's app for daily news and videos

Install App

ರಾಜಧಾನಿಯಲ್ಲಿ ಬಿಡುವು ನೀಡದ ಮಳೆ: ಭಾರತ- ನ್ಯೂಜಿಲೆಂಡ್ ಟೆಸ್ಟ್‌ನ ಮೊದಲ ದಿನದಾಟ ರದ್ದು

Sampriya
ಬುಧವಾರ, 16 ಅಕ್ಟೋಬರ್ 2024 (16:30 IST)
Photo Courtesy X
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಬಿಡದೆ ಮಳೆಯಾಗುತ್ತಿರುವುದರಿಂದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯದ ಆರಂಭದ ದಿನದ ಆಟ ರದ್ದುಗೊಂಡಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ  ಪಂದ್ಯ ಆರಂಭವಾಗಬೇಕಿತ್ತು. ಆದರೆ ಹವಾಮಾನ ವೈಪರಿತ್ಯದಿಂದಾಗಿ ಪಂದ್ಯದ ಮೊದಲ ದಿನದಾಟವನ್ನು ರದ್ದುಗೊಳಿಸಲಾಗಿದೆ.

ನಿಗದಿಯಂತೆ ಮುಂಜಾನೆ 9 ಗಂಟೆಗೆ ಉಭಯ ತಂಡಗಳ ನಡುವೆ ಟಾಸ್ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ಟಾಸ್ ಸಹ ನಡೆಯಲು ಸಾಧ್ಯವಾಗಲಿಲ್ಲ. ಮಂಗಳವಾರಕ್ಕೆ ಹೋಲಿಸಿದರೆ ಇಂದು ಬೆಂಗಳೂರಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆಯಾದರೂ, ತುಂತುರು ಮಳೆ ಬೀಳುತ್ತಲೇ ಇದೆ.

ಮಳೆ ಕೊಂಚ ಕಡಿಮೆಯಾದಾಗಲೆಲ್ಲ ಅಂಪೈರ್​ಗಳು ಮೈದಾನವನ್ನು ಪರಿಶೀಲಿಸಿದರು. ಆದರೆ ಪಂದ್ಯಕ್ಕೆ ಮೈದಾನ ಸಜ್ಜಾಗಿಲ್ಲದ್ದನ್ನು ಮನಗಂಡ ಅಂಪೈರ್ಸ್​ ಕಾದು ನೋಡುವ ತಂತ್ರಕ್ಕೆ ಮುಂದಾದರು. ಹೀಗಾಗಿ ಮೊದಲ ದಿನದಾಟದ ಮೊದಲೆರಡು ಸೆಷನ್​ಗಳವರೆಗೂ ಪಂದ್ಯವನ್ನು ನಡೆಸಲು ಕಾಯಲಾಯಿತು. ಆದರೆ ಆ ಬಳಿಕವೂ ಮಳೆ ನಿಲ್ಲದನ್ನು ಗಮನಿಸಿದ ಅಂಪೈರ್ಸ್​, ದಿನದಾಟವನ್ನು ರದ್ದುಗೊಳಿಸಲು ಮುಂದಾದರು.

ಹವಾಮಾನ ವರದಿಯ ಪ್ರಕಾರ, ಅಕ್ಟೋಬರ್ 20ರವರೆಗೂ ಬೆಂಗಳೂರಿನಲ್ಲಿ ಮಳೆಯಾಗಲಿದೆ.  ಪಂದ್ಯದ ಎರಡನೇ ದಿನದಂದು ಶೇ. 41 ರಷ್ಟು ಮಳೆಯಾಗುವ ಸಾಧ್ಯತೆ ಇದ್ದರೆ, ಮೂರನೇ ದಿನದಂದು ಮಳೆ ಇನ್ನಷ್ಟು ಹೆಚ್ಚಲಿದೆ. ಅದರಂತೆ ಶೇ. 67 ರಷ್ಟು ಮಳೆಯಾಗಲಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

END vs IND Match, ಗ್ರೌಂಡ್‌ಗೆ ಕೈಮುಗಿದು ಕುಟುಂತ್ತಲೇ ಬ್ಯಾಟಿಂಗ್‌ಗೆ ಬಂದ ರಿಷಬ್ ಪಂತ್‌, Video

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ದಿವ್ಯಾಂಶಿ ತಾಯಿಯಿಂದ ಗಂಭೀರ ಆರೋಪ

ಮುಂದಿನ ಸುದ್ದಿ
Show comments