IND vs AUS: ತಾವೇ ವಿಫಲರಾದರೂ ಬೌಲರ್ ಗಳ ಮೇಲೆ ಗೂಬೆ ಕೂರಿಸಿದ ರೋಹಿತ್ ಶರ್ಮಾ

Krishnaveni K
ಸೋಮವಾರ, 30 ಡಿಸೆಂಬರ್ 2024 (14:36 IST)
ಮೆಲ್ಬೊರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಸ್ವತಃ ತಾವೇ ವೈಫಲ್ಯಕ್ಕೊಳಗಾಗಿ ತಂಡದ ಬ್ಯಾಟಿಂಗ್ ಹಳಿ ತಪ್ಪಿದ್ದರೂ ಪ್ರೆಸ್ ಕಾನ್ಫರೆನ್ಸ್ ನಲ್ಲಿ ಬೌಲಿಂಗ್ ನ್ನು ರೋಹಿತ್ ಶರ್ಮಾ ದೂಷಿಸಿದ್ದಾರೆ.

ಈ ಪಂದ್ಯದ ಸೋಲಿನ ಬಗ್ಗೆ ಕಾರಣಗಳನ್ನು ವಿವರಿಸಿದ ರೋಹಿತ್ ಶರ್ಮಾ ದ್ವಿತೀಯ ಇನಿಂಗ್ಸ್ ನಲ್ಲಿ ಆಸೀಸ್ ನ ಬಾಲಂಗೋಚಿ ಬ್ಯಾಟಿಗರ ವಿಕೆಟ್ ಪಡೆಯಲು ವಿಫಲವಾಗಿದ್ದೂ ಸೋಲಿಗೆ ಕಾರಣ ಎಂದಿದ್ದಾರೆ.

ನಾವು ಇಲ್ಲಿಗೆ ಏನು ಮಾಡಲು ಬಂದಿದ್ದೇವೋ ಅದು ಆಗದೇ ಇದ್ದಾಗ ನಿಜಕ್ಕೂ ಬೇಸರವಾಗುತ್ತದೆ. ತಂಡವಾಗಿ ನಾವು ಒಟ್ಟಿಗೇ ಗೆಲುವಿಗಾಗಿ ಹೋರಾಟ ಮಾಡಲು ವಿಫಲರಾದೆವು. ಆದರೆ ಆಸ್ಟ್ರೇಲಿಯಾ ಗೆಲುವಿಗಾಗಿ ಕಠಿಣ ಪರಿಶ್ರಮವಹಿಸಿತು ಎಂದು ರೋಹಿತ್ ಹೇಳಿದ್ದಾರೆ.

ಕೊನೆಯ ವಿಕೆಟ್ ಗೆ ಆಸ್ಟ್ರೇಲಿಯಾ ಬ್ಯಾಟಿಗರ ಜೊತೆಯಾಟ ತಡೆಯಲು ನಾವು ವಿಪಲರಾದೆವು. ಬಹುಶಃ ಅದುವೇ ನಮಗೆ ಮುಳುವಾಯಿತು ಎಂದು ರೋಹಿತ್ ಹೇಳಿದ್ದಾರೆ. ಇನ್ನು, ಈ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ನಿತೀಶ್ ಕುಮಾರ್ ರೆಡ್ಡಿ ಬಗ್ಗೆ ರೋಹಿತ್ ಹೊಗಳಿದ್ದಾರೆ. ಮುಂದಿನ ದಿನಗಳಲ್ಲಿ ತಮಗೆ ಸಿಕ್ಕುವ ಅವಕಾಶವನ್ನು ಬಳಸಿಕೊಂಡು ನಿತೀಶ್ ಇನ್ನಷ್ಟು ಬೆಳೆಯಬಹುದು ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾಗೂ ಹೊಗಳಿಕೆ ನೀಡಿದ್ದಾರೆ. ಜೊತೆಗೆ ಬುಮ್ರಾಗೆ ದುರದೃಷ್ಟವಶಾತ್ ಇನ್ನೊಂದು ತುದಿಯಿಂದ ಬೌಲಿಂಗ್ ನಲ್ಲಿ ಸಾಥ್ ಸಿಗುತ್ತಿಲ್ಲ ಎಂದೂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

ಮುಂದಿನ ಸುದ್ದಿ
Show comments