IND vs AUS: ಕೆಎಲ್ ರಾಹುಲ್ ಗಾಗಿ ರೋಹಿತ್ ಶರ್ಮಾ ತ್ಯಾಗರಾಜನಾಗಲಿದ್ದಾರೆ

Krishnaveni K
ಗುರುವಾರ, 5 ಡಿಸೆಂಬರ್ 2024 (09:18 IST)
ಅಡಿಲೇಡ್: ಹಿಟ್ ಮ್ಯಾನ್ ರೋಹಿತ್ ಶರ್ಮಾ ಎಂದರೆ ಓಪನರ್ ಆಗಿಯೇ ಹೆಸರು ವಾಸಿ. ಆದರೆ ಈಗ ಕೆಎಲ್ ರಾಹುಲ್ ಗಾಗಿ ಅವರು ತ್ಯಾಗರಾಜನಾಗಲು ಹೊರಟಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಅನುಪಸ್ಥಿತಿಯಲ್ಲಿ ರಾಹುಲ್ ಓಪನರ್ ಆಗಿ ಉತ್ತಮ ಬ್ಯಾಟಿಂಗ್ ನಡೆಸಿದ್ದರು. ಈಗ ಎರಡನೇ ಟೆಸ್ಟ್ ಗೆ ರೋಹಿತ್ ಪುನರಾಗಮನ ಮಾಡಿದ್ದಾರೆ. ಆದರೆ ರಾಹುಲ್-ಯಶಸ್ವೀ ಜೈಸ್ವಾಲ್ ಅವರ ಯಶಸ್ವೀ ಓಪನಿಂಗ್ ಜೋಡಿಯನ್ನು ಕಿತ್ತು ಹಾಕಲು ರೋಹಿತ್ ಗೂ ಮನಸ್ಸಿಲ್ಲ.

ಹೀಗಾಗಿ ಈಗ ರಾಹುಲ್ ಗಾಗಿ ರೋಹಿತ್ ತಮ್ಮ ಓಪನಿಂಗ್ ಸ್ಥಾನವನ್ನೇ ಬಿಟ್ಟುಕೊಡಲು ರೆಡಿಯಾಗಿದ್ದಾರೆ. ಅತ್ತ ಜೈಸ್ವಾಲ್ ಕೂಡಾ ಟೆಸ್ಟ್ ಕ್ರಿಕೆಟ್ ನಲ್ಲಿ ಓಪನರ್ ಆಗಿ ಅದ್ಭುತ ಯಶಸ್ಸು ಕಂಡಿದ್ದಾರೆ. ಹೀಗಾಗಿ ಇಬ್ಬರನ್ನೂ ಕಿತ್ತು ಹಾಕಬಾರದೆಂಬ ಕಾರಣಕ್ಕೆ ರೋಹಿತ್ ತಾವೇ ಓಪನರ್ ಸ್ಥಾನ ಬಿಟ್ಟುಕೊಡಲಿದ್ದಾರೆ.

ಅಸಲಿಗೆ ರೋಹಿತ್ ತಮ್ಮ ವೃತ್ತಿ ಜೀವನ ಆರಂಭಿಸಿದ್ದು ಕೆಳ ಕ್ರಮಾಂಕ ಬ್ಯಾಟಿಗನಾಗಿ. ಆದರೆ ಕ್ರಮೇಣ ಅವರು ಓಪನರ್ ಆಗಿ ಬಡ್ತಿ ಪಡೆದರು. ಸೀಮಿತ ಓವರ್ ಗಳ ಪಂದ್ಯಗಳಲ್ಲಿ ಓಪನರ್ ಆಗಿ ಸಕ್ಸಸ್ ಆದ ಬಳಿಕ ರೋಹಿತ್ ಖಾಯಂ ಓಪನರ್ ಆಗಿದ್ದರು. ಈಗ ಮತ್ತೆ ಮಧ್ಯಮ ಕ್ರಮಾಂಕಕ್ಕೆ ಶಿಫ್ಟ್ ಆಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments