Webdunia - Bharat's app for daily news and videos

Install App

IND vs AUS: ಎರಡನೇ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ ಸೋತ ಟೀಂ ಇಂಡಿಯಾ, ಕಾರಣ ಯಾರು

Krishnaveni K
ಭಾನುವಾರ, 8 ಡಿಸೆಂಬರ್ 2024 (11:06 IST)
ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಹೀನಾಯವಾಗಿ ಸೋತಿದೆ. ಭಾರತ ನೀಡಿ 19 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ವಿಕೆಟ್ ನಷ್ಟವಿಲ್ಲದೇ 19 ರನ್ ಗಳಿಸುವ ಮೂಲಕ ಸರಣಿ ಸಮಬಲ ಸಾಧಿಸಿದೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ರೋಹಿತ್, ಗಿಲ್ ರಂತಹ ಪ್ರಮುಖ ಆಟಗಾರರಿಲ್ಲದೇ ಇದ್ದರೂ ಬುಮ್ರಾ ನಾಯಕತ್ವದಲ್ಲಿ ತಂಡ ಅದ್ಭುತ ಗೆಲುವು ದಾಖಲಿಸಿತ್ತು. ಇದಕ್ಕೆ ಮೊದಲು ನಡೆದಿದ್ದ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸೋಲಿನ ಬಳಿಕ ತಂಡ ಅದ್ಭುತವಾಗಿ ಕಮ್ ಬ್ಯಾಕ್ ಮಾಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು.

ಆದರೆ ಎರಡನೇ ಟೆಸ್ಟ್ ಪಂದ್ಯದಲ್ಲಿ ಆ ಗೌರವವೆಲ್ಲಾ ಕಳೆದುಹೋಯಿತು. ಮತ್ತೆ ಕಿವೀಸ್ ವಿರುದ್ಧದ ಸರಣಿಯಲ್ಲಿ ಮಾಡಿದ ತಪ್ಪುಗಳೇ ಪುನರಾವರ್ತನೆಯಾಗಿದೆ. ಬ್ಯಾಟಿಗರು ಎರಡೂ ಇನಿಂಗ್ಸ್ ಗಳಲ್ಲಿ ಕೈ ಕೊಟ್ಟಿದ್ದೇ ಟೀಂ ಇಂಡಿಯಾ ಸೋಲಿಗೆ ಕಾರಣವಾಗಿದೆ. ಅದರಲ್ಲೂ ವಿಶೇಷವಾಗಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ತಂಡಕ್ಕೆ ದುಬಾರಿಯಾಗುತ್ತಿದ್ದಾರೆ.

ಎರಡನೇ ಇನಿಂಗ್ಸ್ ನಲ್ಲಿ ಭಾರತ 157 ರನ್ ಗಳ ಹಿನ್ನಡೆಯೊಂದಿಗೆ ಇನಿಂಗ್ಸ್ ಆರಂಭಿಸಿ 175 ರನ್ ಗಳಿಗೆ ಆಲೌಟ್ ಆಗಿತ್ತು. ಕೇವಲ 19 ರನ್ ಗಳ ಗೆಲುವಿನ ಗುರಿ ತಲುಪುವುದು ಆಸೀಸ್ ಗೆ ಕಷ್ಟವೇ ಆಗಲಿಲ್ಲ. ವಿಪರ್ಯಾಸವೆಂದರೆ ಈ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತ್ತು. ಯಾಕೋ ಇತ್ತೀಚೆಗಿನ ದಿನಗಳಲ್ಲಿ ನಾಯಕ ರೋಹಿತ್ ಶರ್ಮಾ ಟಾಸ್ ನಿಂದಲೇ ಎಡವುತ್ತಿದ್ದಾರೆ. ಕಿವೀಸ್ ಸರಣಿಯಲ್ಲೂ ಇದೇ ತಪ್ಪು ಮಾಡಿದ್ದರು. ಈಗ ಇಲ್ಲಿಯೂ ಅದನ್ನೇ ಮಾಡುತ್ತಿದ್ದಾರೆ. ಟೀಂ ಇಂಡಿಯಾ ಟೆಸ್ಟ್ ಫಾರ್ಮ್ಯಾಟ್ ನಲ್ಲಿ ಪ್ರಬಲ ತಂಡ. ಆದರೆ ಘಟಾನುಘಟಿ ಆಟಗಾರರಿದ್ದರೂ ಇತ್ತೀಚೆಗೆ ನೀಡುತ್ತಿರುವ ಪ್ರದರ್ಶನ ಎಲ್ಲರ ನಿರಾಸೆಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

END vs IND Match, ಗ್ರೌಂಡ್‌ಗೆ ಕೈಮುಗಿದು ಕುಟುಂತ್ತಲೇ ಬ್ಯಾಟಿಂಗ್‌ಗೆ ಬಂದ ರಿಷಬ್ ಪಂತ್‌, Video

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ದಿವ್ಯಾಂಶಿ ತಾಯಿಯಿಂದ ಗಂಭೀರ ಆರೋಪ

IND vs ENG: ಟೀಂ ಇಂಡಿಯಾಗೆ ಬಿಗ್ ಶಾಕ್, ರಿಷಭ್ ಪಂತ್ ಸರಣಿಯಿಂದಲೇ ಔಟ್

ಮುಂದಿನ ಸುದ್ದಿ
Show comments