Webdunia - Bharat's app for daily news and videos

Install App

IND vs ENG: ಅರ್ಷ್ ದೀಪ್ ಸಿಂಗ್ ಗೆ ಗಾಯ, ಜಸ್ಪ್ರೀತ್ ಬುಮ್ರಾ ಆಡುವುದು ಅನಿವಾರ್ಯ

Krishnaveni K
ಶುಕ್ರವಾರ, 18 ಜುಲೈ 2025 (10:27 IST)
Photo Credit: X
ಬೆಕೆನ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾದಿಂದ ಆಘಾತಕಾರೀ ಸುದ್ದಿ ಬಂದಿದೆ. ವೇಗಿ ಅರ್ಷ್ ದೀಪ್ ಸಿಂಗ್ ಗಾಯಗೊಂಡಿದ್ದು ಜಸ್ಪ್ರೀತ್ ಬುಮ್ರಾ ಆಡುವುದು ಅನಿವಾರ್ಯವಾಗಿದೆ.

ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ನಿನ್ನೆಯಿಂದ ಅಭ್ಯಾಸ ಆರಂಭಿಸಿದೆ. ಅಭ್ಯಾಸದ ವೇಳೆ ವೇಗಿ ಅರ್ಷ್ ದೀಪ್ ಸಿಂಗ್ ಕೈಗೆ ಬ್ಯಾಂಡೇಜ್ ಮಾಡಿಕೊಂಡಿರುವುದು ಕಂಡುಬಂದಿದೆ. ಅವರ ಎಡಗೈಗೆ ಗಾಯವಾಗಿರುವುದು ತಿಳಿದುಬಂದಿದೆ.

ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಹಿರಿಯ ವೇಗಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗುವುದು ಎಂಬ ಸುದ್ದಿಗಳಿತ್ತು. ಅವರ ಸ್ಥಾನದಲ್ಲಿ ಅರ್ಷ್ ದೀಪ್ ಸಿಂಗ್ ಗೆ ಅವಕಾಶ ನೀಡುವ ಸಾಧ್ಯತೆಗಳಿತ್ತು. ಆದರೆ ಸದ್ಯಕ್ಕೆ ಅರ್ಷ್ ದೀಪ್ ಕೈಯಲ್ಲಿರುವ ಬ್ಯಾಂಡೇಜ್ ನೋಡಿದರೆ ಅವರು ಆಡುವ ಸಾಧ್ಯತೆಯಿಲ್ಲ.

ಹೀಗಾದಲ್ಲಿ ಬುಮ್ರಾ ಅನಿವಾರ್ಯವಾಗಿ ನಾಲ್ಕನೇ ಟೆಸ್ಟ್ ಪಂದ್ಯ ಆಡಬೇಕಾಗುತ್ತದೆ. ಪ್ರಸಿದ್ಧ ಕೃಷ್ಣ ಫಾರ್ಮ್ ನಲ್ಲಿಲ್ಲದೇ ಇರುವುದು ತಂಡಕ್ಕೆ ಮತ್ತೊಂದು ಹೊಡೆತವಾಗಿದೆ. ಇದೀಗ ನಾಲ್ಕನೇ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿರುವ ಟೀಂ ಇಂಡಿಯಾರನ್ನು ಬುಮ್ರಾರನ್ನು ಕಣಕ್ಕಿಳಿಸುವುದು ಬಹತೇಕ ಖಚಿತ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಅರ್ಷ್ ದೀಪ್ ಸಿಂಗ್ ಗೆ ಗಾಯ, ಜಸ್ಪ್ರೀತ್ ಬುಮ್ರಾ ಆಡುವುದು ಅನಿವಾರ್ಯ

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

IND vs ENG: ರಿಷಭ್ ಪಂತ್ ಗಾಯ ಹೇಗಿದೆ, ಮುಂದಿನ ಪಂದ್ಯದಲ್ಲಿ ಆಡ್ತಾರಾ

ಮೂರನೇ ಟೆಸ್ಟ್‌ನ ಕೊನೆಯಲ್ಲಿ ಸಿರಾಜ್‌ ಔಟಾದಾಗ ಏನನ್ನಿಸಿತು: ಶುಭಮನ್‌ ಗಿಲ್‌ಗೆ ಕಿಂಗ್ಸ್‌ ಚಾರ್ಲ್ಸ್‌ ಪ್ರಶ್ನೆ

ಮುಂದಿನ ಸುದ್ದಿ
Show comments