Webdunia - Bharat's app for daily news and videos

Install App

IND vs ENG: ಇಬ್ಬರ ವೃತ್ತಿ ಜೀವನ ಖತಂಗೊಳಿಸಿದ ಧ್ರುವ್ ಜುರೆಲ್

Krishnaveni K
ಮಂಗಳವಾರ, 27 ಫೆಬ್ರವರಿ 2024 (09:00 IST)
Photo Courtesy: Twitter
ರಾಂಚಿ: ಟೀಂ ಇಂಡಿಯಾ ಯುವ ವಿಕೆಟ್ ಕೀಪರ್ ಬ್ಯಾಟಿಗ ಧ್ರುವ್ ಜುರೆಲ್ ತನಗೆ ಸಿಕ್ಕ ಅವಕಾಶವನ್ನು ಸರಿಯಾಗಿಯೇ ಬಳಸಿಕೊಂಡಿದ್ದಾರೆ. ನಾಲ್ಕನೇ ಪಂದ್ಯದ ಎರಡೂ ಇನಿಂಗ್ಸ್ ಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ.

ರಾಂಚಿಯಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಧ‍್ರುವ್ ಬಾಲಂಗೋಚಿಗಳನ್ನು ಕಟ್ಟಿಕೊಂಡು ಹೋರಾಡಿ 90 ರನ್ ಗಳಿಸದೇ ಹೋಗಿದ್ದರೆ ಟೀಂ ಇಂಡಿಯಾ ಈ ಪಂದ್ಯ ಸೋಲಬೇಕಾಗಿತ್ತು. ದ್ವಿತೀಯ ಇನಿಂಗ್ಸ್ ನಲ್ಲಿ ಶುಬ್ಮನ್ ಗಿಲ್ ಗೆ ಸಾಥ್ ನೀಡದೇ ಹೋಗಿದ್ದರೆ ಭಾರತಕ್ಕೆ ಸೋಲು ಖಚಿತವಾಗಿತ್ತು. ಆದರೆ ಎರಡೂ ಇನಿಂಗ್ಸ್ ಗಳಲ್ಲಿ ಆಪತ್ಬಾಂಧವನಂತೆ ಆಡಿದ ಧ‍್ರುವ್ ಜುರೆಲ್ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಗಿದ್ದ ದೊಡ್ಡ ತಲೆನೋವು ನಿವಾರಿಸಿದೆ.

ಇಶಾನ್ ಕಿಶನ್ ರಾಷ್ಟ್ರೀಯ ತಂಡಕ್ಕೆ ಕೈಕೊಟ್ಟಾಗ ಕೆಎಸ್ ಭರತ್ ಗೆ ಟೆಸ್ಟ್ ತಂಡದಲ್ಲಿ ಕೀಪಿಂಗ್ ಹೊಣೆ ನೀಡಲಾಗಿತ್ತು. ಆದರೆ ಭರತ್ ಬ್ಯಾಟಿಂಗ್ ನಲ್ಲಿ ದಯನೀಯ ವೈಫಲ್ಯ ಅನುಭವಿಸಿದ್ದರು. ಕೀಪಿಂಗ್ ಕೂಡಾ ಅಷ್ಟಕ್ಕಷ್ಟೇ ಎನ್ನುವಂತಾಗಿತ್ತು. ಹೀಗಾಗಿ ಕೆಲವರು ಇಶಾನ್ ರನ್ನು ಹೇಗಾದರೂ ಮಾಡಿ ಮರಳಿ ಕರೆಸಬೇಕು ಎಂದು ಹೇಳಲು ಶುರು ಮಾಡಿದ್ದರು. ಆದರೆ ತನ್ನ ಮಾತು ಕೇಳದ ಇಶಾನ್ ಗೆ ಮಣೆ ಹಾಕಲು ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ರೆಡಿ ಇರಲಿಲ್ಲ. ಹೀಗಾಗಿ ಧ್ರುವ್ ಜುರೆಲ್ ಗೆ ಅವಕಾಶ ಕೊಟ್ಟಿತು. ಜುರೆಲ್ ಇದನ್ನು ಎರಡೂ ಕೈಗಳಿಂದ ಬಾಚಿಕೊಂಡಿದ್ದಾರೆ.

ಇದೀಗ ಧ್ರುವ್ ರಾಂಚಿ ಟೆಸ್ಟ್ ಇನಿಂಗ್ಸ್ ಮೂಲಕ ಇಬ್ಬರ ವೃತ್ತಿ ಜೀವನವನ್ನು ಖತಂಗೊಳಿಸಿದ್ದಾರೆ. ಜುರೆಲ್ ಕೀಪಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಮಿಂಚಿರುವುದರಿಂದ ಈಗ ಕೆಎಸ್ ಭರತ್ ಗೆ ಅವಕಾಶ ಸಿಗುವುದು ಅನುಮಾನವಾಗಿದೆ. ಅತ್ತ ಬಿಸಿಸಿಐ ಮಾತನ್ನೇ ಧಿಕ್ಕರಿಸಿ ದುರಹಂಕಾರ ತೋರಿದ ಇಶಾನ್ ಕಿಶನ್ ಗೂ ಇನ್ನು ಟೆಸ್ಟ್ ತಂಡದ ಬಾಗಿಲು ತೆಗೆಯದು. ಅಲ್ಲಿಗೆ ಧ್ರುವ್ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ತಲೆನೋವು ಕಡಿಮೆ ಮಾಡಿದ್ದಲ್ಲದೆ, ಇಬ್ಬರ ವೃತ್ತಿ ಜೀವನವನ್ನೇ ಕೊನೆಗೊಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Asia Cup: ದುಬೈ ನೆಲದಲ್ಲಿ ಪಾಕ್‌ಗೆ ಮಣ್ಣು ಮುಕ್ಕಿಸಿ, ಏಷ್ಯಾ ಕಪ್ ಗೆದ್ದ ಭಾರತ

Asia Cup Final: ಸ್ಪಿನ್ ಸುಳಿಗೆ ಪಾಕ್‌ ತತ್ತರ: ಭಾರತದ ಗೆಲುವಿಗೆ ಸಾಧಾರಣ ಸವಾಲು

Asia Cup Cricket: ಭಾರತಕ್ಕೆ ಶಾಕ್‌: ಫೈನಲ್‌ಗೆ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಅಲಭ್ಯ

ಬಿಸಿಸಿಐ ಸಾರಥಿಯಾಗಿ ಮಿಥುನ್ ಮನ್ಹಾಸ್ ನೇಮಕ: ಕರ್ನಾಟಕದ ರಘುರಾಮ್ ಭಟ್ ಖಜಾಂಚಿ

Asia Cup Cricket: ಫೈನಲ್‌ನಲ್ಲಿ ಭಾರತ–ಪಾಕ್‌ ಮೊದಲ ಬಾರಿ ಮುಖಾಮುಖಿಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments