Webdunia - Bharat's app for daily news and videos

Install App

IND vs ENG: ಟಾಸ್ ಗೆದ್ದಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಹಲವು ಬದಲಾವಣೆ

Krishnaveni K
ಬುಧವಾರ, 2 ಜುಲೈ 2025 (15:10 IST)
ಎಜ್ ಬಾಸ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಎಜ್ ಬಾಸ್ಟನ್ ನಲ್ಲಿ ಇಂದಿನಿಂದ ಆರಂಭವಾಗುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಟೀಂ ಇಂಡಿಯಾದಲ್ಲಿ ಹಲವು ಬದಲಾವಣೆ ಮಾಡಲಾಗಿದೆ.

ಕಳೆದ ಪಂದ್ಯವನ್ನು ಗೆಲ್ಲುವ ಎಲ್ಲಾ ಅವಕಾಶಗಳಿದ್ದೂ ಟೀಂ ಇಂಡಿಯಾ ಕಳಪೆ ಫೀಲ್ಡಿಂಗ್ ನಿಂದಾಗಿ ಸೋತಿತ್ತು. ಜೊತೆಗೆ ಕೆಳ ಕ್ರಮಾಂಕದ ಬ್ಯಾಟಿಗರು ವಿಫಲರಾಗಿದ್ದರು. ಹೀಗಾಗಿ ಈ ಪಂದ್ಯಕ್ಕೆ ಭಾರೀ ಬದಲಾವಣೆಯೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿದಿದೆ.

ನಿರೀಕ್ಷೆಯಂತೇ ಜಸ್ಪ್ರೀತ್ ಬುಮ್ರಾ ಈ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದಾರೆ. ಅವರ ಸ್ಥಾನಕ್ಕೆ ಆಕಾಶ್ ದೀಪ್ ಗೆ ಸ್ಥಾನ ನೀಡಲಾಗಿದೆ. ಅರ್ಷ್ ದೀಪ್ ಸಿಂಗ್ ಮತ್ತೆ ಬೆಂಚ್ ಕಾಯಿಸಬೇಕಾಗಿದೆ. ಉಳಿದಂತೆ ಕಳೆದ ಪಂದ್ಯದಲ್ಲಿ ಆಡಿದ್ದ ಸಾಯಿ ಸುದರ್ಶನ್ ಸ್ಥಾನ ಕಳೆದುಕೊಂಡಿದ್ದಾರೆ. ಕರುಣ್ ನಾಯರ್ ಸ್ಥಾನ ಉಳಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ.

ತಂಡ ಇಂತಿದೆ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಕರುಣ್ ನಾಯರ್, ಶುಬ್ಮನ್ ಗಿಲ್ (ನಾಯಕ) ರಿಷಭ್ ಪಂತ್ (ಉಪನಾಯಕ), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ ಕೃಷ್ಣ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾದಿಂದ ಎತ್ತಂಗಡಿಯಾದ ಐಸಿಸಿ ಚೊಚ್ಚಲ ಮಹಿಳಾ ಚಾಂಪಿಯನ್ಸ್‌ ಟ್ರೋಫಿ ಆತಿಥ್ಯ ಭಾರತದ ಹೆಗಲಿಗೆ

ಸಾಲು ಸಾಲು ದಾಖಲೆ ಬರೆದು ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ ಹೇಳಿದ ದಿಗ್ಗಜ ಲಯೊನೆಲ್‌ ಮೆಸ್ಸಿ

ಕಾರಿನ ಬಳಿ ಬಂದು ಸಹಾಯ ಬೇಡಿದ ಗೋರಕ್ಷಕನಿಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಮಾಡಿದ್ದೇನು Video

ಮೆಟ್ರೋ ರೈಲಿನಲ್ಲಿ ಸಾಮಾನ್ಯರಂತೆ ಮೂಲೆಯಲ್ಲಿ ನಿಂತಿದ್ದ ಜಾವಗಲ್ ಶ್ರೀನಾಥ್ ನೋಡಿ ಪಬ್ಲಿಕ್ ಶಾಕ್

ಭಾರತ ಟಿ20 ತಂಡದಿಂದ ಕೈಬಿಟ್ಟಿದ್ದು ಆಘಾತ ತಂದಿದೆ: ಕೊನೆಗೂ ಮೌನ ಮುರಿದ ಸೂರ್ಯಕುಮಾರ್‌ ಯಾದವ್‌

ಮುಂದಿನ ಸುದ್ದಿ
Show comments