IND vs ENG: ಕರುಣ್ ನಾಯರ್ ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು

Krishnaveni K
ಶನಿವಾರ, 5 ಜುಲೈ 2025 (16:47 IST)
Photo Credit: X
ಎಜ್ ಬಾಸ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್ ನಲ್ಲೂ ಕರುಣ್ ನಾಯರ್ ಕಳಪೆ ಮೊತ್ತಕ್ಕೆ ಔಟಾಗಿದ್ದು ನೆಟ್ಟಿಗರಿಂದ ತೀವ್ರ ಟ್ರೋಲ್ ಗೊಳಗಾಗಿದ್ದಾರೆ. ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಅಜೇಯರಾಗಿದ್ದ ಕರುಣ್ ನಾಯರ್ ಇಂದ ಬೆಳಗಿನ ಅವಧಿಯಲ್ಲೇ ವಿಕೆಟ್ ಒಪ್ಪಿಸಿದ್ದಾರೆ. ಅವರು ಗಳಿಸಿದ್ದು ಕೇವಲ 26 ರನ್. ಕೆಎಲ್ ರಾಹುಲ್ ಜೊತೆಗೂಡಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಡುವ ಎಲ್ಲಾ ಅವಕಾಶವಿದ್ದರೂ ಅವರು ಕೈ ಚೆಲ್ಲಿದ್ದಾರೆ. ಭಾರತ ಇತ್ತೀಚೆಗಿನ ವರದಿ ಬಂದಾಗ 2 ವಿಕೆಟ್ ನಷ್ಟಕ್ಕೆ 119 ರನ್ ಗಳಿಸಿದೆ.

ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತದ ಪರ ತ್ರಿಶತಕ ಗಳಿಸಿದ ಎರಡನೇ ಆಟಗಾರ ಎಂಬ ಖ್ಯಾತಿ ಕರುಣ್ ನಾಯರ್ ರದ್ದು. ಆದರೆ ಕಳೆದ 8 ವರ್ಷಗಳಿಂದ ಅವರಿಗೆ ಟೀಂ ಇಂಡಿಯಾದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಒಮ್ಮೆ ಅವರು ಸೋಷಿಯಲ್ ಮೀಡಿಯಾದಲ್ಲಿ ‘ಡಿಯರ್ ಕ್ರಿಕೆಟ್ ನನಗೆ ಇನ್ನೊಂದು ಅವಕಾಶ ಕೊಡು’ ಎಂದು ಕೇಳಿಕೊಂಡಿದ್ದರು.

ಇದೀಗ ದೇಶೀಯ ಕ್ರಿಕೆಟ್ ನಲ್ಲಿ ಮಿಂಚಿದ್ದರಿಂದ 8 ವರ್ಷಗಳ ಬಳಿಕ ಕೊನೆಗೂ ಅವರಿಗೆ ತಂಡದಲ್ಲಿ ಅವಕಾಶ ಸಿಕ್ಕಿತ್ತು. ಆದರೆ ಅದನ್ನು ಅವರು ಬಳಸಿಕೊಳ್ಳಲು ವಿಫಲರಾಗಿದ್ದಾರೆ. ಇದಕ್ಕೆ ಅವರು ತೀವ್ರ ಟೀಕೆಗೊಳಗಾಗಿದ್ದಾರೆ. ಈಗ ಸ್ವತಃ ಕ್ರಿಕೆಟ್ ನಿಮ್ಮನ್ನು ನೋಡಿ ನಗುತ್ತಿರಬಹುದು ಎಂದು ಹಲವರು ಟ್ರೋಲ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವಿ ವಾಂಟ್ ಸಂಜು ಎಂದು ಜೋರಾಗಿ ಕೂಗಿದ ಫ್ಯಾನ್ಸ್: ಗಂಭೀರ್, ತಿಲಕ್ ವರ್ಮ ಮುಖಭಾವ ನೋಡಬೇಕು Video

IND vs ENG: ಟೀಂ ಇಂಡಿಯಾ ಹೀನಾಯವಾಗಿ ಸೋತ ಮೇಲೂ ಪತ್ರಿಕಾಗೋಷ್ಠಿಯಲ್ಲಿ ಕೋಚ್ ಗೌತಮ್ ಗಂಭೀರ್ ಹೀಗೆ ಹೇಳೋದಾ Video

IND vs ENG: ಇಂದು ವೈಭವ್ ಸೂರ್ಯವಂಶಿ ಆಡೋದು ಡೌಟ್, ಎಲ್ಲದಕ್ಕೂ ಕನ್ನಡಿಗ ರಘು ಕಾರಣ Video

ವಿಶ್ವಕಪ್ ಹೀರೋಗೆ ಶಾಕ್: ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಸಂಜು ಸ್ಯಾಮ್ಸನ್ ಗೆ ಕೊಕ್

ಅಟೋಗ್ರಾಫ್ ಗಾಗಿ ಅಭಿಮಾನಿ ಕೊಟ್ಟ ಪೆನ್ನು ಸರಿ ಇರಲಿಲ್ಲವೆಂದು ವೈಭವ್ ಸೂರ್ಯವಂಶಿ ಮಾಡಿದ್ದೇನು ಗೊತ್ತಾ Video

ಮುಂದಿನ ಸುದ್ದಿ
Show comments