IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

Krishnaveni K
ಸೋಮವಾರ, 4 ಆಗಸ್ಟ್ 2025 (16:47 IST)
Photo Credit: X
ದಿ ಓವಲ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ರೋಚಕವಾಗಿ 6 ರನ್ ಗಳಿಂದ ಗೆದ್ದುಕೊಂಡಿದೆ. ಅದರಲ್ಲೂ ಆ ಒಂದು ಯಾರ್ಕರ್ ನನ್ನು ಬಹುಶಃ ವೇಗಿ ಮೊಹಮ್ಮದ್ ಸಿರಾಜ್ ತಮ್ಮ ಜೀವನದಲ್ಲೇ ಮರೆಯಲ್ಲ.

ಗೆಲುವಿಗೆ 374 ರನ್ ಗಳ ಗುರಿ ಪಡೆದು ಮೈದಾನಕ್ಕಿಳಿದಿದ್ದ ಇಂಗ್ಲೆಂಡ್ ಇಂದು ಪಂದ್ಯ ಗೆದ್ದು ಸರಣಿಯನ್ನೂ ತನ್ನದಾಗಿಸಿಕೊಳ್ಳುತ್ತದೆ ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ ಕೊನೆಯ ದಿನದಲ್ಲಿ ಟೀಂ ಇಂಡಿಯಾ ವೇಗಿಗಳಾದ ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ ಮ್ಯಾಜಿಕ್ ಮಾಡಿಬಿಟ್ಟರು.

ನಿನ್ನೆ 339 ರನ್ ಗಳಿಗೆ 6 ವಿಕೆಟ್ ಕಳೆದುಕೊಂಡು ದಿನದಂತ್ಯ ಮಾಡಿದ್ದ ಇಂಗ್ಲೆಂಡ್ ಗೆ ಗೆಲ್ಲುವ ಎಲ್ಲಾ ಅವಕಾಶವಿತ್ತು. ಗಸ್ ಅಟ್ಕಿನ್ಸನ್ 17 ರನ್ ಗಳಿಸಿದ್ದು ಬಿಟ್ಟರೆ ಕೊನೆಯ ಕ್ರಮಾಂಕದ ಬ್ಯಾಟಿಗರೆಲ್ಲರೂ ಸಿಂಗಲ್ ಡಿಜಿಟ್ ಗೆ ಔಟಾದರು. ಕೊನೆಯ ನಾಲ್ಕೂ ವಿಕೆಟ್ ಗಳು ಸಿರಾಜ್-ಪ್ರಸಿದ್ಧ ಪಾಲಾಯಿತು. ಈ ಪೈಕಿ ಮೊಹಮ್ಮದ್ ಸಿರಾಜ್ 5 ವಿಕೆಟ್ ಪಡೆದರೆ ಪ್ರಸಿದ್ಧ 4 ವಿಕೆಟ್ ತಮ್ಮದಾಗಿಸಿಕೊಂಡರು.

ಒಂದು ಹಂತದಲ್ಲಿ 357 ರನ್ ಗಳಿಗೆ 9 ವಿಕೆಟ್ ಕಳೆದುಕೊಂಡಿದ್ದರೂ ಅಟ್ಕಿಸನ್ ಗೆಲುವು ಕಸಿದುಕೊಳ್ಳುವ ಭೀತಿಯಿತ್ತು. ಆದರೆ ಮೊಹಮ್ಮದ್ ಸಿರಾಜ್ ಅದ್ಭುತ ಯಾರ್ಕರ್ ಅವರನ್ನು ಬೌಲ್ಡ್ ಔಟ್ ಮಾಡುವಂತೆ ಮಾಡಿತು. ಬಹುಶಃ ಈ ಒಂದು ಎಸೆತವನ್ನು ಸಿರಾಜ್ ಎಂದಿಗೂ ಮರೆಯಲ್ಲ. ಈ ಗೆಲುವಿನೊಂದಿಗೆ ಭಾರತ ತೆಂಡುಲ್ಕರ್-ಆಂಡರ್ಸನ್ ಟ್ರೋಫಿಯನ್ನು 2-2 ರಿಂದ ಸಮಬಲಗೊಳಿಸಿದೆ. ಭಾರತ ತಂಡವಂತೂ ವಿಶ್ವಕಪ್ ಗೆದ್ದಂತೆ ಇಡೀ ಮೈದಾನಕ್ಕೆ ಸುತ್ತು ಬಂದು ಸಂಭ್ರಮಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments