IND vs ENG: ಮೂರನೇ ದಿನದಾಟದಲ್ಲಿ ಮೈದಾನಕ್ಕಿಳಿಯದ ರೋಹಿತ್ ಶರ್ಮಾ

Krishnaveni K
ಶನಿವಾರ, 9 ಮಾರ್ಚ್ 2024 (13:39 IST)
ಧರ್ಮಶಾಲಾ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೈದಾನಕ್ಕಿಳಿಯಲಿಲ್ಲ. ಅವರ ಬದಲಿಗೆ ಉಪನಾಯಕ ಜಸ್ಪ್ರೀತ್ ಬುಮ್ರಾ ತಂಡ ಮುನ್ನಡೆಸಿದರು.

ರೋಹಿತ್ ಶರ್ಮಾ ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ ಶತಕ ಗಳಿಸಿದ್ದರು. ನಿನ್ನೆ ಭೋಜನ ವಿರಾಮದ ಬಳಿಕ ಔಟಾದ ಅವರು ಪೆವಿಲಿಯನ್ ಸೇರಿಕೊಂಡರು. ಆದರೆ ಇಂಗ್ಲೆಂಡ್ ದ್ವಿತೀಯ ಇನಿಂಗ್ಸ್ ವೇಳೆ ರೋಹಿತ್ ಪೆವಿಲಿಯನ್ ನಲ್ಲೇ ಉಳಿದುಕೊಂಡರು. ಅವರ ಬದಲು ಬುಮ್ರಾ ನಾಯಕತ್ವದ ಹೊಣೆ ಹೊತ್ತುಕೊಂಡರು.

ರೋಹಿತ್ ಶರ್ಮಾಗೆ ಕೊಂಚ ಬೆನ್ನು ನೋವು ಕಾಣಿಸಿಕೊಂಡಿದ್ದು  ಈ ಕಾರಣಕ್ಕೆ ಫೀಲ್ಡಿಂಗ್ ಮಾಡಲು ಮೈದಾನಕ್ಕೆ ಬರಲಿಲ್ಲ. ಸುದೀರ್ಘ ಸಮಯದವರೆಗೆ ಬ್ಯಾಟ್ ಮಾಡಿದ್ದ ರೋಹಿತ್ ಬಳಲಿದ್ದರು. ಹೀಗಾಗಿ ಫೀಲ್ಡಿಂಗ್ ಮಾಡುತ್ತಿಲ್ಲ. ಆದರೆ ಅವರ ಗಾಯದ ಬಗ್ಗೆ ಬಿಸಿಸಿಐ ಯಾವುದೇ ಮಾಹಿತಿ ನೀಡಿಲ್ಲ.

ಆದರೆ ಅವರ ಅನುಪಸ್ಥಿತಿ ತಂಡದ ಮೇಲೆ ಪರಿಣಾಮ ಬೀರಲಿಲ್ಲ. ಭಾರತೀಯ ಬೌಲರ್ ಗಳು ಟೀಂ ಇಂಡಿಯಾ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಿದ್ದರು. ಆದರೆ ರೋಹಿತ್ ಅನುಪಸ್ಥಿತಿಯಲ್ಲಿ ಬುಮ್ರಾ ಎರಡು ರಿವ್ಯೂಗಳನ್ನು ತೆಗೆದುಕೊಂಡು ವ್ಯರ್ಥ ಮಾಡಿದ್ದು ಟೀಕೆಗೊಳಗಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ಮುಂದಿನ ಸುದ್ದಿ
Show comments