IND vs ENG T20: ಈ ಕಾರಣಕ್ಕಾದರೂ ಟೀಂ ಇಂಡಿಯಾ ಇಂದಿನ ಪಂದ್ಯ ಗೆಲ್ಲಬೇಕಿದೆ

Krishnaveni K
ಭಾನುವಾರ, 2 ಫೆಬ್ರವರಿ 2025 (09:00 IST)
ಮುಂಬೈ: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದು ಮುಂಬೈನ ವಾಂಖೆಡೆ ಮೈದಾನದಲ್ಲಿ ಔಪಚಾರಿಕ ಟಿ20 ಪಂದ್ಯ ನಡೆಯಲಿದೆ. ಐದು ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ ಈಗಾಗಲೇ 3-1 ಅಂತರದಿಂದ ಗೆದ್ದುಕೊಂಡಿದೆ.

ಹೀಗಾಗಿ  ಈ ಪಂದ್ಯ ಭಾರತಕ್ಕೆ ಔಪಚಾರಿಕವಾಗಿದೆ. ಒಂದು ವೇಳೆ ಸೋತರೂ ಸರಣಿ ಕೈತಪ್ಪಿ ಹೋಗಲ್ಲ. ಆದರೆ ಕಳೆದ ಪಂದ್ಯದಲ್ಲಿ ಹರ್ಷಿತ್ ರಾಣಾರನ್ನು ಬದಲಿ ಆಟಗಾರನಾಗಿ ಕರೆತಂದು ಟೀಂ ಇಂಡಿಯಾ ಮೋಸ ಮಾಡಿತ್ತು ಎಂದು ಇಂಗ್ಲೆಂಡ್ ಆಪಾದಿಸಿತ್ತು.

ಆ ಅಪವಾದ ತೊಡೆದು ನಾವು ಯಾವುದೇ ಆಟಗಾರನಾಗಿದ್ದರೂ ಗೆಲ್ಲುವ ಸಾಮರ್ಥ್ಯ ಹೊಂದಿದ್ದೇವೆ ಎಂದು ತೋರಿಸಿಕೊಳ್ಳುವ ಅನಿವಾರ್ಯತೆ ಸೂರ್ಯಕುಮಾರ್ ಯಾದವ್ ಪಡೆಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಈ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಹೆಚ್ಚು ಸದ್ದು ಮಾಡಿಲ್ಲ.

ಆದರೆ ಕೊನೆಯ ಪಂದ್ಯವಾಗಿರುವುದರಿಂದ ಈ ಪಂದ್ಯಕ್ಕೆ ಇದುವರೆಗೆ ಅವಕಾಶ ಸಿಗದ ಆಟಗಾರರಿಗೆ ಅವಕಾಶ ಸಿಗುವ ಸಾಧ್ಯತೆಯಿದೆ. ಕಳೆದ ಪಂದ್ಯದಲ್ಲಿ ಬದಲಿ ಆಟಗಾರನಾಗಿದ್ದ ಉತ್ತಮ ಪ್ರದರ್ಶನ ನೀಡಿದ್ದ ಹರ್ಷಿತ್ ರಾಣಾಗೆ ಇಂದು ಆಡುವ ಬಳಗದಲ್ಲಿ ಅವಕಾಶ ಸಿಗಬಹುದು. ಉಳಿದಂತೆ ತಂಡದ ಕಾಂಬಿನೇಷನ್ ನಲ್ಲಿ ಯಾವ ಬದಲಾವಣೆಯಿರಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಮುಂದಿನ ಸುದ್ದಿ
Show comments