Webdunia - Bharat's app for daily news and videos

Install App

IND vs ENG test: ಈ ಕಾರಣಕ್ಕೆ ಇಂದಿನ ದಿನದಾಟಕ್ಕೆ ರವಿಚಂದ್ರನ್ ಅಶ್ವಿನ್ ಗೈರು

Krishnaveni K
ಶನಿವಾರ, 17 ಫೆಬ್ರವರಿ 2024 (09:35 IST)
Photo Courtesy: Twitter
ರಾಜ್ ಕೋಟ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೂರನೇ ದಿನದಾಟದಲ್ಲಿ ಇಂದು ರವಿಚಂದ್ರನ್ ಅಶ್ವಿನ್‍ ಕೌಟುಂಬಿಕ ಕಾರಣಗಳಿಂದಾಗಿ ಗೈರಾಗಲಿದ್ದಾರೆ.
 

ಇಂದಿನ ದಿನದಾಟದಲ್ಲಿ ಅಶ್ವಿನ್ ಗೈರಾಗಲಿದ್ದಾರೆ. ಆದರೆ ನಾಳೆ ಅವರು ಪಂದ್ಯಕ್ಕೆ ಲಭ್ಯರರಿರಲಿದ್ದಾರೆ. ಕ್ರಿಕೆಟ್ ನಲ್ಲಿ ಈ ರೀತಿ ಆಗುವುದು ಬಲು ಅಪರೂಪ. ಆದರೆ ಅಶ್ವಿನ್ ಅನಿವಾರ್ಯ ಕಾರಣಗಳಿಗೆ ಮನೆಗೆ ತೆರಳಲೇಬೇಕಾದ ಪರಿಸ್ಥಿತಿ ಬಂದಿದೆ. ಹೀಗಾಗಿ ಅವರು ನಿನ್ನೆಯೇ ಚೆನ್ನೈಗೆ ಮರಳಿದ್ದಾರೆ. ಅಂತಹ ಸಂದರ್ಭವೇನು?

ರವಿಚಂದ್ರನ್ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು ಅವರನ್ನು ನೋಡಲು ಅನಿವಾರ್ಯವಾಗಿ ಅಶ್ವಿನ್ ತೆರಳಬೇಕಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅಶ್ವಿನ್ ತಾಯಿಗೆ ಅನಾರೋಗ್ಯವಾಗಿದ್ದು, ಅದಕ್ಕಾಗಿ ಅವರು ರಾಜ್ ಕೋಟ್ ನಿಂದ ನೇರವಾಗಿ ಮನೆಗೆ ತೆರಳಲಿದ್ದಾರೆ. ಅವರು ಬೇಗನೇ ಹುಷಾರಾಗಲಿ ಎಂದು ಹಾರೈಸಿದ್ದಾರೆ.

ಇಂಗ್ಲೆಂಡ್ ಮೊದಲ ಇನಿಂಗ್ಸ್ ನಲ್ಲಿ ನಿನ್ನೆಯ ದಿನ ಅಶ್ವಿನ್ ಮೊದಲ ವಿಕೆಟ್ ಕೀಳುವುದರ ಮೂಲಕ ಭಾರತಕ್ಕೆ ಬ್ರೇಕ್ ಥ್ರೂ ನೀಡಿದ್ದರು. ಜೊತೆಗೆ ಟೆಸ್ಟ್ ಕ್ರಿಕೆಟ್ ನಲ್ಲಿ 500 ವಿಕೆಟ್ ಕಿತ್ತು ದಾಖಲೆ ಮಾಡಿದ್ದರು. ವಿಪರ್ಯಾಸವೆಂದರೆ ಇಂತಹ ಖುಷಿಯ ಸಂದರ್ಭದಲ್ಲಿಯೇ ಅಮ್ಮನ ಅನಾರೋಗ್ಯದ ಸುದ್ದಿ ಅವರನ್ನು ಕಂಗೆಡಿಸಿದೆ. ಮತ್ತೊಂದೆಡೆ ಬೀಡು ಬೀಸಾಗಿ ಬ್ಯಾಟ್ ಮಾಡುತ್ತಿರುವ ಇಂಗ್ಲೆಂಡ್ ಗೆ ಕಡಿವಾಣ ಹಾಕಲು ಇಂದು ಅಶ‍್ವಿನ್ ಇರಲೇಬೇಕಿತ್ತು. ಅವರ ಅನುಪಸ್ಥಿತಿ ಟೀಂ ಇಂಡಿಯಾಗೂ ಕಾಡಲಿದೆ.
 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments