Webdunia - Bharat's app for daily news and videos

Install App

IND vs ENG: ಮುಂದಿನ ಪಂದ್ಯಕ್ಕೆ ಈ ಇಬ್ಬರೂ ಕನ್ನಡಿಗರಿಗೆ ಗೇಟ್ ಪಾಸ್

Krishnaveni K
ಸೋಮವಾರ, 7 ಜುಲೈ 2025 (09:10 IST)
ಎಜ್ ಬಾಸ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯವೂ ನಿನ್ನೆ ಮುಕ್ತಾಯವಾಗಿದೆ. ಇದೀಗ ಮೂರನೇ ಪಂದ್ಯಕ್ಕೆ ಈ ಇಬ್ಬರು ಕನ್ನಡಿಗರಿಗೆ ಗೇಟ್ ಪಾಸ್ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯ ಜುಲೈ 10 ರಿಂದ 14 ರವರೆಗೆ ನಡೆಯಲಿದೆ. ಭಾರತ ತಂಡಕ್ಕೆ ಈಗ ಮೂರೇ ದಿನಗಳಲ್ಲಿ ಮತ್ತೊಂದು ಪಂದ್ಯಕ್ಕೆ ಅಣಿಯಾಗಬೇಕಿದೆ.

ಮೂಲಗಳ ಪ್ರಕಾರ ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆಗಳಾಗಲಿವೆ. ಅದರಲ್ಲೂ ಇಬ್ಬರು ಕನ್ನಡಿಗ ಆಟಗಾರರಿಗೆ ಗೇಟ್ ಪಾಸ್ ದೊರೆಯಲಿದೆ ಎನ್ನಲಾಗುತ್ತಿದೆ. ಬೌಲರ್ ಪ್ರಸಿದ್ಧ ಕೃಷ್ಣ ಮತ್ತು ಬ್ಯಾಟಿಗ ಕರುಣ್ ನಾಯರ್ ಗೆ ಕೊಕ್ ನೀಡುವ ಸಾಧ್ಯತೆಯಿದೆ.

ಈ ಇಬ್ಬರೂ ಕಳೆದ ಎರಡೂ ಪಂದ್ಯಗಳಲ್ಲಿ ತೋರಿದ ಕಳಪೆ ನಿರ್ವಹಣೆ ಟೀಕೆಗೆ ಕಾರಣವಾಗಿದೆ. ಅದರಲ್ಲೂ ಪ್ರಸಿದ್ಧ ಕೃಷ್ಣ ಕಳೆದ ಪಂದ್ಯದಲ್ಲಿ ಮೊದಲ ಇನಿಂಗ್ಸ್ ನಲ್ಲಿ ವಿಕೆಟ್ ಕೀಳಲು ವಿಫಲರಾಗಿದ್ದಲ್ಲದೆ, ರನ್ ನೀಡಿ ದುಬಾರಿಯೆನಿಸಿದ್ದರು. ಎರಡನೇ ಇನಿಂಗ್ಸ್ ನಲ್ಲೂ ಅವರು ಪರಿಣಾಮಕಾರಿ ಬೌಲಿಂಗ್ ಮಾಡಿಲ್ಲ.

ಇನ್ನು ಕರುಣ್ ನಾಯರ್ ಕೂಡಾ ಹಲವು ವರ್ಷಗಳ ನಂತರ ತಂಡಕ್ಕೆ ಆಯ್ಕೆಯಾದರೂ ಅದಕ್ಕೆ ತಕ್ಕ ಪ್ರದರ್ಶನ ನೀಡಿಲ್ಲ. ಹೀಗಾಗಿ ಮುಂದಿನ ಪಂದ್ಯಕ್ಕೆ ಜಸ್ಪ್ರೀತ್ ಬುಮ್ರಾ ವಾಪಸ್ ಆದರೆ ಪ್ರಸಿದ್ಧ ಕೃಷ್ಣ ಸ್ಥಾನ ಕಳೆದುಕೊಳ್ಳಬಹುದು. ಆಕಾಶ್ ದೀಪ್ ಅದ್ಭುತ ಬೌಲಿಂಗ್ ಮಾಡಿದ್ದು ಸ್ಥಾನ ಉಳಿಸಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಈ ವಿಚಾರಕ್ಕೆ ಯಾವತ್ತೂ ಹಿಂದೆ ಸರಿಯುವುದಿಲ್ಲ: ಚೇತೇಶ್ವರ ರಿಯ್ಯಾಕ್ಷನ್

ಕಾಲ್ತುಳಿತ ಘಟನೆ ಬಳಿಕ ಆರ್ ಸಿಬಿ ಮೊದಲ ಪೋಸ್ಟ್: ಮಹತ್ವದ ಘೋಷಣೆ

ಒಂದೇ ವರ್ಷಕ್ಕೆ ಡೆಲ್ಲಿ ಬಿಟ್ಟು ಈ ತಂಡವನ್ನು ಸೇರಿಕೊಳ್ಳಲಿದ್ದಾರೆ ಕೆಎಲ್ ರಾಹುಲ್

ಮೊಹಮ್ಮದ್ ಶಮಿಯನ್ನು ಟೀಂ ಇಂಡಿಯಾಕ್ಕೆ ಯಾಕೆ ಆಯ್ಕೆ ಮಾಡ್ತಿಲ್ಲ: ಶಾಕಿಂಗ್ ಹೇಳಿಕೆ ನೀಡಿದ ವೇಗಿ

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಿಂದ ಸ್ಪಷ್ಟನೆ ಕೇಳಿದ ಬೆನ್ನಲ್ಲೇ ಐಪಿಎಲ್‌ಗೆ ರವಿಚಂದ್ರನ್‌ ಅಶ್ವಿನ್ ಗುಡ್‌ಬೈ

ಮುಂದಿನ ಸುದ್ದಿ
Show comments