IND vs NZ Test: ಚಿನ್ನಸ್ವಾಮಿ ಮೈದಾನದಲ್ಲಿ ಇಂದು ಕೈಗೆ ಸಿಕ್ಕ ಚಾನ್ಸ್ ಬಳಸಿಕೊಳ್ತಾರಾ ಕೆಎಲ್ ರಾಹುಲ್

Krishnaveni K
ಶನಿವಾರ, 19 ಅಕ್ಟೋಬರ್ 2024 (08:40 IST)
ಬೆಂಗಳೂರು: ತವರಿನ ಪ್ರೇಕ್ಷಕರ ಮುಂದೆ ಭರ್ಜರಿ ಬ್ಯಾಟಿಂಗ್ ಮಾಡುವುದು ಎಲ್ಲಾ ಕ್ರಿಕೆಟಿಗರ ಕನಸಾಗಿರುತ್ತದೆ. ಕೆಎಲ್ ರಾಹುಲ್ ರಿಂದಲೂ ಇಂದು ಬೆಂಗಳೂರಿನ ಪ್ರೇಕ್ಷಕರು ಇದನ್ನೇ ನಿರೀಕ್ಷೆ ಮಾಡುತ್ತಿದ್ದಾರೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ದ್ವಿತೀಯ ಇನಿಂಗ್ಸ್ ನಲ್ಲಿ ಭಾರತ ಮೂರನೇ ದಿನದಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 231 ರನ್ ಗಳಿಸಿದೆ. ಮೊದಲ ಇನಿಂಗ್ಸ್ ಹಿನ್ನಡೆ ದಾಟಲು ಭಾರತ ಇನ್ನೂ 125 ರನ್ ಗಳಿಸಬೇಕಿದೆ. ಆ ಬಳಿಕ ನ್ಯೂಜಿಲೆಂಡ್ ಗೆ ಪೈಪೋಟಿಕರ ಗೆಲುವಿನ ಗುರಿ ಹಾಕಿಕೊಡಬೇಕಿದೆ.

ಇದೆಲ್ಲಾ ಸುಲಭದ ಕೆಲಸವಲ್ಲ. ಆದರೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಈಗ ಲೋಕಲ್ ಹುಡುಗ ಕೆಎಲ್ ರಾಹುಲ್ ಮೇಲೆ ಅಪಾರ ನಿರೀಕ್ಷೆಯಿಟ್ಟುಕೊಂಡಿದ್ದಾರೆ. ಕೆಎಲ್ ರಾಹುಲ್ ಮತ್ತು ಸರ್ಫರಾಜ್ ಖಾನ್ ಇಂದು ಭರ್ಜರಿ ಬ್ಯಾಟಿಂಗ್ ನಡೆಸಿದರೆ ಭಾರತ ಈ ಪಂದ್ಯವನ್ನು ಸೇವ್ ಮಾಡಲು ಇನ್ನೂ ಅವಕಾಶವಿದೆ ಎಂಬ ನಂಬಿಕೆಯಲ್ಲಿದ್ದಾರೆ.

ಮೊದಲ ಇನಿಂಗ್ಸ್ ನಲ್ಲಿ ಶೂನ್ಯ ಸುತ್ತಿ ತವರಿನ ಪ್ರೇಕ್ಷಕರಿಗೆ ನಿರಾಸೆ ಉಂಟು ಮಾಡಿದ್ದ ಕೆಎಲ್ ರಾಹುಲ್ ಬಳಿಕ ಫೀಲ್ಡಿಂಗ್ ನಲ್ಲೂ ಕ್ಯಾಚ್ ಬಿಟ್ಟು ವಿಲನ್ ಆಗಿದ್ದರು. ಚಿನ್ನಸ್ವಾಮಿ ಪಿಚ್ ಬಗ್ಗೆ ರಾಹುಲ್ ಗಿಂತ ಚೆನ್ನಾಗಿ ಬಲ್ಲವರು ಯಾರಿದ್ದಾರೆ? ಹೀಗಾಗಿ ಇಂದು ಅವರು ಶತಕದ ಇನಿಂಗ್ಸ್ ಆಡಿ ತಂಡವನ್ನು ಕಾಪಾಡಿದರೆ ಹೀರೋ ಆಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಕದಿನ ಕ್ರಿಕೆಟ್‌ನಲ್ಲಿ ಮೋಡಿ ಬೆನ್ನಲ್ಲೇ ಕೊಹ್ಲಿ ವೈಜಾಗ್‌ನ ಪ್ರಮುಖ ದೇವಸ್ಥಾನಕ್ಕೆ ಭೇಟಿ

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಜೈಸ್ವಾಲ್ ಕೇಕ್ ತಿನ್ನಿಸಲು ಹೋದ್ರೆ ರೋಹಿತ್ ಶರ್ಮಾ ಹೀಗೇ ನಡೆದುಕೊಳ್ಳುವುದಾ, Video

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments