Webdunia - Bharat's app for daily news and videos

Install App

IND vs NZ Test: ಚಿನ್ನಸ್ವಾಮಿ ಮೈದಾನ ಮಳೆಯಿಂದ ಒದ್ದೆ, ಇಂದಿನ ಪಂದ್ಯಕ್ಕೆ ಕಾರ್ಮೋಡ

Krishnaveni K
ಬುಧವಾರ, 16 ಅಕ್ಟೋಬರ್ 2024 (09:49 IST)
Photo Credit: X
ಬೆಂಗಳೂರು: ಚಿನ್ನಸ್ವಾಮಿ ಮೈದಾನದಲ್ಲಿ ಭಾರೀ ಮಳೆಯಿಂದಾಗಿ ಇಂದು ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಆರಂಭವಾಗಬೇಕಾಗಿದ್ದ ಟೆಸ್ಟ್ ಪಂದ್ಯ ಇನ್ನೂ ಆರಂಭವಾಗಿಲ್ಲ.

ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಕಡೆ ಭಾರೀ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ನಿನ್ನೆಯಷ್ಟು ಮಳೆ ಇಲ್ಲವಾದರೂ ಇಂದೂ ತುಂತುರು ಮಳೆ, ದಟ್ಟ ಮೋಡ ಕವಿದ ವಾತಾವರಣ ಮುಂದುವರಿದಿದೆ. ನಿನ್ನೆ ಭಾರೀ ಮಳೆ ಸುರಿದಿದ್ದರಿಂದ ಮೈದಾನ ಸಂಪೂರ್ಣವಾಗಿ ಒದ್ದೆಯಾಗಿದೆ.

ಮೈದಾನ ಒಣಗಿಸಲು ತುಂತುರು ಮಳೆ ಬಿಡುತ್ತಿಲ್ಲ.  ಇದರಿಂದಾಗಿ ಮೈದಾನಕ್ಕೆ ಹಾಕಿರುವ ಕವರ್ಸ್ ತೆಗೆಯಲಾಗಿಲ್ಲ. ಪಿಚ್ ನ್ನು ಮುಚ್ಚಲಾಗಿದ್ದರೂ ಹೊರಾವರಣ ಸಂಪೂರ್ಣವಾಗಿ ಒದ್ದೆಯಾಗಿದೆ. ಇಂದು ಪಂದ್ಯ ನಡೆಯುವ ಸಾಧ್ಯತೆಯಿಲ್ಲ ಎಂಬ ಮುನ್ಸೂಚನೆ ಮೊದಲೇ ಇದ್ದಿದ್ದರಿಂದ ಅಭಿಮಾನಿಗಳು ಮೈದಾನಕ್ಕೆ ಬರುವ ಆಸಕ್ತಿ ತೋರುತ್ತಿಲ್ಲ.

ಹವಾಮಾನ ಇಲಾಖೆ ವರದಿ ಪ್ರಕಾರ ಮುಂದಿನ ಮೂರು ದಿನಗಳ ಕಾಲ ಮತ್ತೆ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಈ ಪಂದ್ಯ ನಡೆಯುವುದೇ ಅನುಮಾನ ಎಂಬ ಪರಿಸ್ಥಿತಿಯಿದೆ. ಹಲವು ದಿನಗಳ ಬಳಿಕ ಚಿನ್ನಸ್ವಾಮಿ ಮೈದಾನದಲ್ಲಿ ಟೆಸ್ಟ್ ಪಂದ್ಯವಾಗುತ್ತಿದೆ. ಆದರೆ ಪಂದ್ಯ ನಡೆಯದೇ ಇರುವುದು ಅಭಿಮಾನಿಗಳಿಗೆ ನಿರಾಸೆ ತಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments