IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

Krishnaveni K
ಶನಿವಾರ, 22 ನವೆಂಬರ್ 2025 (09:18 IST)
Photo Credit: X
ಗುವಾಹಟಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ನಾಯಕ ಬದಲಾದರೂ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ.

ಶುಭಮನ್ ಗಿಲ್ ಗಾಯಗೊಂಡ ಕಾರಣ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಡುತ್ತಿಲ್ಲ. ಅವರ ಬದಲಿಗೆ ರಿಷಭ್ ಪಂತ್ ನಾಯಕರಾಗಿದ್ದಾರೆ. ಈ ಮೂಲಕ ಎಂಎಸ್ ಧೋನಿ ಬಳಿಕ ಟೀಂ ಇಂಡಿಯಾವನ್ನು ಟೆಸ್ಟ್ ಪಂದ್ಯಗಳಲ್ಲಿ ಮುನ್ನಡೆಸುತ್ತಿರುವ ಎರಡನೇ ವಿಕೆಟ್ ಕೀಪರ್ ಎನ್ನುವ ಖ್ಯಾತಿ ಅವರದ್ದಾಗಿದೆ.

ಅದೇನೇ ಇದ್ದರೂ ಟೀಂ ಇಂಡಿಯಾಕ್ಕೆ ಟಾಸ್ ಗೆಲ್ಲುವ ಅದೃಷ್ಟ ಮಾತ್ರ ಕೂಡಿಬಂದಿಲ್ಲ. ಇತ್ತೀಚೆಗಿನ ದಿನಗಳಲ್ಲಿ ಟೀಂ ಇಂಡಿಯಾ ಯಾವುದೇ ಮಾದರಿಯಲ್ಲೂ ಟಾಸ್ ಗೆಲ್ಲುವುದೇ ಕಷ್ಟವಾಗಿದೆ. ಟಾಸ್ ಸೋಲುವುದರಲ್ಲೇ ಟೀಂ ಇಂಡಿಯಾ ದಾಖಲೆ ಮಾಡಿದೆ. ಕಳೆದ ಪಂದ್ಯದಲ್ಲೂ ಶುಭಮನ್ ಗಿಲ್ ಟಾಸ್ ಸೋತಿದ್ದರು.

ಈ ಪಂದ್ಯದಲ್ಲಿ ರಿಷಭ್ ಪಂತ್ ನಾಯಕನಾದರೂ ಟಾಸ್ ಮಾತ್ರ ಗೆದ್ದಿಲ್ಲ. ಇಂದಿನ ಪಂದ್ಯದಲ್ಲೂ ಟಾಸ್ ಗೆದ್ದ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಪಂದ್ಯಕ್ಕೆ ಭಾರತ ಎರಡು ಬದಲಾವಣೆ ಮಾಡಿಕೊಂಡಿದೆ. ಶುಭಮನ್ ಗಿಲ್ ಸ್ಥಾನಕ್ಕೆ ಸಾಯಿ ಸುದರ್ಶನ್ ಮತ್ತು ಅಕ್ಸರ್ ಪಟೇಲ್ ಬದಲಿಗೆ ನಿತೀಶ್ ಕುಮಾರ್ ರೆಡ್ಡಿಗೆ ಅವಕಾಶ ನೀಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ವಿಶ್ವಕಪ್ ಗೆದ್ದ ಮೈದಾನದಲ್ಲೇ ಸ್ಮೃತಿ ಮಂಧಾನಗೆ ಕನಸಿನಂತೆ ಪ್ರಪೋಸ್ ಮಾಡಿದ ಭಾವೀ ಪತಿ video

ಸಖತ್ ಫನ್ನಿಯಾಗಿ ಎಂಗೇಜ್ ಮೆಂಟ್ ವಿಷ್ಯ ಹೊರಹಾಕಿದ ಸ್ಮೃತಿ ಮಂಧಾನ Video

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಮುಂದಿನ ಸುದ್ದಿ
Show comments