Webdunia - Bharat's app for daily news and videos

Install App

IND vs ZIM: ಅಭಿಷೇಕ್ ಶರ್ಮಾ ಈ ಪಾಟಿ ಸಿಕ್ಸರ್ ಬಾರಿಸುವುದಕ್ಕೆ ಕಾರಣವೂ ಇದೆ

Krishnaveni K
ಸೋಮವಾರ, 8 ಜುಲೈ 2024 (14:07 IST)
Photo Credit: BCCI
ಹರಾರೆ: ಜಿಂಬಾಬ್ವೆ ವಿರುದ್ಧ ದ್ವಿತೀಯ ಟಿ20 ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ ಟೀಂ ಇಂಡಿಯಾ ಯುವ ಆರಂಭಿಕ ಅಭಿಷೇಕ್ ಶರ್ಮ ಯಶಸ್ಸಿನ ಹಿಂದೆ ಈ ಮಾಜಿ ಆಟಗಾರ ಇದ್ದಾರೆ.

ನಿನ್ನೆಯ ಪಂದ್ಯದಲ್ಲಿ ಅಭಿಷೇಕ್ ಸಿಕ್ಸರ್ ಗಳ ಮಳೆ ಸುರಿಸಿದ್ದರು. ಸಿಕ್ಸರ್ ಮೂಲಕವೇ ಶತಕ ದಾಖಲಿಸಿದ್ದರು. ಅದೂ ನಿರಾಸಯಾಸವಾಗಿ ಅವರು ಸಿಕ್ಸರ್ ಬಾರಿಸುವ ಕಲೆ ಸಿದ್ಧಿಸಿದ್ದಾರೆ. ಇದೆಲ್ಲದರ ಹಿಂದೆ ಭಾರತೀಯ ಕ್ರಿಕೆಟ್ ಕಂಡ ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ಕೊಡುಗೆಯೂ ಇದೆ.

ಯುವರಾಜ್ ಸಿಂಗ್ ಗರಡಿಯಲ್ಲಿ ಪಳಗಿದ ಪ್ರತಿಭೆ ಅಭಿಷೇಕ್ ಶರ್ಮ. ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಭರ್ಜರಿ ಬ್ಯಾಟಿಂಗ್ ಮಾಡಿ ಸುದ್ದಿಯಾಗಿದ್ದ ಅಭಿಷೇಕ್ ಗೆ ಈಗ ಟೀಂ ಇಂಡಿಯಾ ಪರ ಆಡುವ ಅವಕಾಶ ಸಿಕ್ಕಿದೆ. ಇದನ್ನು ಅವರು ಎರಡೂ ಕೈಗಳಿಂದ ಬಾಚಿಕೊಂಡಿದ್ದಾರೆ.

ಮೊದಲ ಪಂದ್ಯದಲ್ಲಿ ಅವರ ಅಬ್ಬರದ ಬ್ಯಾಟಿಂಗ್ ನೋಡಿ ಅಭಿಮಾನಿಗಳು ರೋಹಿತ್ ಶರ್ಮಾ ಹೋಗಿದ್ದಕ್ಕೆ ಟೀಂ ಇಂಡಿಯಾಕ್ಕೆ ಸಿಕ್ಕ ಮತ್ತೊಬ್ಬ ಶರ್ಮ ಎಂದು ಹೊಗಳಿದ್ದರು. ಅಭಿಷೇಕ್ ಶರ್ಮ ಕೂಡಾ ಯುವರಾಜ್ ತವರು ಪಂಜಾಬ್ ನವರು. ಅಭಿಷೇಕ್ ಗೆ ಯುವಿ ಮಾರ್ಗದರ್ಶನ ಸಿಕ್ಕಿತ್ತು. ಇದೀಗ 23 ವರ್ಷದ ಯುವ ಪ್ರತಿಭೆಗೆ ರಾಷ್ಟ್ರೀಯ ತಂಡದ ಪರ ಮಿಂಚುವ ಅವಕಾಶ ಸಿಕ್ಕಿದೆ. ನಿನ್ನೆಯ ಪಂದ್ಯದಲ್ಲಿ ಅವರು ಆಡಿದ ರೀತಿ ಗುರು ಯುವರಾಜ್ ಮೆಚ್ಚುಗೆಗೂ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

ಮುಂದಿನ ಸುದ್ದಿ
Show comments