Publish Date: Sat, 02 Mar 2019 (13:16 IST)
Updated Date: Sat, 02 Mar 2019 (13:18 IST)
ಹೈದರಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಈಗಾಗಲೇ ಟಿ20 ಸರಣಿ ಸೋತಿರುವ ಟೀಂ ಇಂಡಿಯಾಕ್ಕೆ ಏಕದಿನ ಸರಣಿ ಗೆಲ್ಲುವ ಒತ್ತಡವಿದೆ. ಇನ್ನು ಟಾಸ್ ಸಂದರ್ಭದಲ್ಲಿ ಮಾತನಾಡಿದ ನಾಯಕ ವಿರಾಟ್ ಕೊಹ್ಲಿ ನಾವು ಟಾಸ್ ಗೆದ್ದಿದ್ದರೂ ಮೊದಲು ಫೀಲ್ಡಿಂಗ್ ಆಯ್ದುಕೊಳ್ಳುತ್ತಿದ್ದೆ ಎಂದಿದ್ದಾರೆ.
ಇನ್ನು, ಭಾರತ ತಂಡಕ್ಕೆ ವಿಜಯ್ ಶಂಕರ್ ಮತ್ತು ರವೀಂದ್ರ ಜಡೇಜಾ ಆಗಮನವಾಗಿದೆ. ಯಜುವೇಂದ್ರ ಚಾಹಲ್ ಈ ಪಂದ್ಯದಲ್ಲಿ ಆಡುತ್ತಿಲ್ಲ. ಉಳಿದಂತೆ ಆರಂಭಿಕರಾಗಿ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಇದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಧೋನಿ ಜತೆಗೆ ಕೇದಾರ್ ಜಾದವ್ ಮತ್ತು ಅಂಬಟಿ ರಾಯುಡು ಇರಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ ಮತ್ತು ಜಸ್ಪ್ರೀತ್ ಬುಮ್ರಾ ಆಡುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.