Publish Date: Sat, 13 Feb 2021 (09:05 IST)
Updated Date: Sat, 13 Feb 2021 (09:06 IST)
ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವೆ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಈ ಪಂದ್ಯವನ್ನು ಭಾರತ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಹೀಗಾಗಿ ಈ ಪಂದ್ಯಕ್ಕೆ ಕೆಲವು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಅಚ್ಚರಿಯ ಸಂಗತಿಯೆಂದರೆ ಇನ್ ಫಾರ್ಮ್ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಬದಲಿಗೆ ಅಕ್ಸರ್ ಪಟೇಲ್ ಗೆ ಅವಕಾಶ ನೀಡಲಾಗಿದ್ದು, ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಿ ಯುವ ವೇಗಿ ಮೊಹಮ್ಮದ್ ಸಿರಾಜ್ ಗೆ ಸ್ಥಾನ ನೀಡಲಾಗಿದೆ. ಶಹಬಾಜ್ ನದೀಂ ಸ್ಥಾನಕ್ಕೆ ಕುಲದೀಪ್ ಯಾದವ್ ಕರೆತರಲಾಗಿದೆ. ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ಯಾವುದೇ ಬದಲಾವಣೆಯಿಲ್ಲ.