Webdunia - Bharat's app for daily news and videos

Install App

ಭಾರತ-ಇಂಗ್ಲೆಂಡ್ ಮ್ಯಾಚ್ ಡ್ರಾ ಬಳಿಕ ತೀವ್ರ ನಿರಾಶೆ ಹೊರ ಹಾಕಿದ ಕೆಎಲ್ ರಾಹುಲ್

Webdunia
ಸೋಮವಾರ, 9 ಆಗಸ್ಟ್ 2021 (08:53 IST)
ಟ್ರೆಂಟ್ ಬ್ರಿಡ್ಜ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ವರುಣ ವಿಲನ್ ಆಗಿದ್ದಾನೆ. ಅಂತಿಮ ದಿನದಾಟವಿಡೀ ಮಳೆಯಿಂದಾಗಿ ವಾಶ್ ಔಟ್ ಆಯಿತು. ಇದರಿಂದಾಗಿ ಟೀಂ ಇಂಡಿಯಾ ಗೆಲ್ಲಬೇಕಾಗಿದ್ದ ಪಂದ್ಯ ಡ್ರಾನಲ್ಲಿ ಅಂತ್ಯವಾಯಿತು.


ನಾಲ್ಕನೇ ದಿನದಂತ್ಯಕ್ಕೆ 209 ರನ್ ಗಳ ಗುರಿ ಬೆನ್ನತ್ತುವಲ್ಲಿ 1 ವಿಕೆಟ್ ನಷ್ಟಕ್ಕೆ ಭಾರತ 52 ರನ್ ಗಳಿಸಿತ್ತು. ಗೆಲುವಿಗೆ ಇನ್ನು 157 ರನ್ ಗಳಿಸಿದ್ದರೆ ಸಾಕಿತ್ತು. ಒಂದು ವೇಳೆ ನಿನ್ನೆ ಅರ್ಧ ದಿನದ ಆಟವಾಡಿದ್ದರೂ ಭಾರತ ಗೆಲ್ಲುವ ಸಾಧ‍್ಯತೆಯಿತ್ತು.

ಆದರೆ ಮಳೆಗೆ ಅದೇನು ಕೋಪವಿತ್ತೋ ದಿನವಿಡೀ ಹಾಜರಿ ಹಾಕಿತ್ತು. ಇದರಿಂದಾಗಿ ಗೆಲ್ಲಬೇಕಿದ್ದ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯವಾಯಿತು. ಪಂದ್ಯದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಈ ಪಂದ್ಯದ ಹೀರೋ ಕೆಎಲ್ ರಾಹುಲ್ ನಿರಾಸೆ ಹೊರಹಾಕಿದ್ದಾರೆ. ಅದ್ಭುತವಾಗಿ ಕೊನೆಗಾಣಬೇಕಾಗಿದ್ದ ಪಂದ್ಯ ಕೊನೆಗೆ ಡ್ರಾನಲ್ಲಿ ಅಂತ್ಯವಾಗಿದ್ದು ನಿಜಕ್ಕೂ ಬೇಸರವಾಗಿದೆ ಎಂದು ರಾಹುಲ್ ಹೇಳಿದ್ದಾರೆ. ಈ ಪಂದ್ಯದಲ್ಲಿ ಭಾರತ ಮೊದಲ ಇನಿಂಗ್ಸ್ ಮುನ್ನಡೆ ಪಡೆಯಲು ಅವರ ಕೊಡುಗೆಯೇ ಮುಖ್ಯವಾಗಿತ್ತು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments