ಭಾರತ-ನ್ಯೂಜಿಲೆಂಡ್ ನಾಲ್ಕನೇ ಟಿ20: ಬೆಂಚ್ ಹುಡುಗರಿಗೆ ಅವಕಾಶ ನೀಡಲಿರುವ ವಿರಾಟ್ ಕೊಹ್ಲಿ

Webdunia
ಶುಕ್ರವಾರ, 31 ಜನವರಿ 2020 (09:54 IST)
ವೆಲ್ಲಿಂಗ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದು ನಾಲ್ಕನೇ ಟಿ20 ಪಂದ್ಯ ವೆಲ್ಲಿಂಗ್ಟನ್ ನ ವೆಸ್ಟ್ ಪ್ಯಾಕ್ ಮೈದಾನದಲ್ಲಿ ನಡೆಯಲಿದೆ. ಈಗಾಗಲೇ ಭಾರತ ಸರಣಿ ಗೆದ್ದಿರುವುದರಿಂದ ಉಳಿದೆರಡು ಪಂದ್ಯಗಳು ಔಪಚಾರಿಕವೆನಿಸಲಿದೆ.


ಸರಣಿಯಲ್ಲಿ ಇದುವರೆಗೆ ಒಂದೂ ಪಂದ್ಯ ಗೆಲ್ಲದ ಅತಿಥೇಯ ತಂಡ ಪ್ರತಿಷ್ಠೆ ಉಳಿಸುವ ಸಲುವಾಗಿ ಉಳಿದೆರಡು ಪಂದ್ಯಗಳನ್ನು ಗೆಲ್ಲಲು ಪ್ರಯತ್ನ ನಡೆಸಲಿದೆ. ಕಳೆದ ಪಂದ್ಯದಲ್ಲಿ ದುರಾದೃಷ್ಟವಶಾತ್ ನ್ಯೂಜಿಲೆಂಡ್ ಸೂಪರ್ ಓವರ್ ನಲ್ಲಿ ಸೋಲಬೇಕಾಯಿತು. ಆದರೆ ಉಳಿದಂತೆ ಅತಿಥೇಯರ ಪ್ರದರ್ಶನ ಉತ್ತಮವಾಗಿತ್ತು.

ಈಗಾಗಲೇ ವಿರಾಟ್ ಕೊಹ್ಲಿ ಉಳಿದೆರಡು ಪಂದ್ಯಗಳನ್ನೂ ಗೆದ್ದು 5-0 ರಿಂದ ಸರಣಿ ಸ್ವೀಪ್ ಮಾಡುವುದೇ ಗುರಿ ಎಂದಿದ್ದಾರೆ. ಅದರ ಜತೆಗೆ ಇದುವರೆಗೆ ಸರಣಿಯಲ್ಲಿ ಆಡಲು ಅವಕಾಶ ಸಿಗದ ಬೆಂಚ್ ಹುಡುಗರಿಗೆ ಅವಕಾಶ ನೀಡುವುದಾಗಿ ಹೇಳಿದ್ದಾರೆ. ಅದರಲ್ಲೂ ನವದೀಪ್ ಸೈನಿ, ವಾಷಿಂಗ್ಟನ್ ಸುಂದರ್ ಮುಂತಾದ ಯುವ ಆಟಗಾರರಿಗೆ ಅವಕಾಶ ನೀಡುವುದಾಗಿ ಹೇಳಿದ್ದಾರೆ. ಹೀಗಾಗಿ ಉಳಿದೆರಡು ಪಂದ್ಯಗಳೂ ಭಾರತದ ಪಾಲಿಗೆ ಬೆಂಚ್ ಸ್ಟ್ರೆಂಗ್ತ್ ಪರೀಕ್ಷಿಸುವ ಪ್ರಯೋಗ ಪಂದ್ಯವಾಗಲಿದೆ. ಭಾರತೀಯ ಕಾಲಮಾನ ಪ್ರಕಾರ ಪಂದ್ಯ ಮಧ್ಯಾಹ್ನ 12.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments