Webdunia - Bharat's app for daily news and videos

Install App

ಭಾರತ-ನ್ಯೂಜಿಲೆಂಡ್ ಪಂದ್ಯಕ್ಕೆ ಸೂರ್ಯ ಅಡ್ಡಿಯಾಗಲು ನಿಜ ಕಾರಣವೇನು ಗೊತ್ತಾ?

Webdunia
ಗುರುವಾರ, 24 ಜನವರಿ 2019 (09:22 IST)
ನೇಪಿಯರ್: ಸಾಮಾನ್ಯವಾಗಿ ಕ್ರಿಕೆಟ್ ಪಂದ್ಯಗಳು ಮಳೆ, ಮಂದ ಬೆಳಕಿನ ಕಾರಣದಿಂದ ನಿಲ್ಲುತ್ತವೆ. ಆದರೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಸೂರ್ಯನ ಬಿಸಿಲಿನಿಂದಾಗಿ ನಿಂತಿತು.


ಊಟದ ವಿರಾಮದ ಬಳಿಕ ಭಾರತ ಎರಡನೇ ಓವರ್ ಆಡುವಷ್ಟರಲ್ಲಿ ಶಿಖರ್ ಧವನ್ ಬಿಸಿಲಿನ ಝಳಕ್ಕೆ ಬಾಲ್ ಕಾಣಿಸುತ್ತಿಲ್ಲ ಎಂದು ಅಂಪಾಯರ್ ಗೆ ದೂರಿತ್ತರು. ಇದರಿಂದಾಗಿ ಅಂಪಾಯರ್ ಗಳು ಪಂದ್ಯವನ್ನು ಕೆಲ ಕಾಲ ಸ್ಥಗಿತಗೊಳಿಸಲು ತೀರ್ಮಾನಿಸಿದರು.

ಆ ಸಮಯದಲ್ಲಿ ಬ್ಯಾಟ್ಸ್ ಮನ್ ನ ಕಣ್ಣಿಗೆ ನೇರವಾಗಿ ಸೂರ್ಯನ ಪ್ರಖರ ಬೆಳಕು ಬೀಳುತ್ತಿತ್ತು. ಇದರಿಂದಾಗಿ ಚೆಂಡು ಕಾಣಿಸುತ್ತಿರಲಿಲ್ಲ. ಸಾಮಾನ್ಯವಾಗಿ ಕ್ರಿಕೆಟ್ ಮೈದಾನದಲ್ಲಿ ಪಿಚ್ ನ್ನು ಉತ್ತರ-ದಕ್ಷಿಣ ಅಭಿಮುಖವಾಗಿ ನಿರ್ಮಿಸಲಾಗುತ್ತದೆ. ಇದರಿಂದ ಎಷ್ಟೇ ಸೂರ್ಯನ ಬೆಳಕಿದ್ದರೂ ಬ್ಯಾಟ್ಸ್ ಮನ್ ಗಳಿಗೆ ತೊಂದರೆಯಾಗುವುದಿಲ್ಲ. ಆದರೆ ನೇಪಿಯರ್ ಅಂಗಣದಲ್ಲಿ ಪೂರ್ವ-ಪಶ್ಚಿಮಾಭಿಮುಖವಾಗಿ ಪಿಚ್ ನಿರ್ಮಿಸಿದ್ದೇ ಈ ಅವಾಂತರಕ್ಕೆ ಕಾರಣವಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments