Webdunia - Bharat's app for daily news and videos

Install App

ಭಾರತ-ನ್ಯೂಜಿಲೆಂಡ್ ಟಿ20 ಸರಣಿ ಇಂದಿನಿಂದ: ಹಾರ್ದಿಕ್ ಪಾಂಡ್ಯ ನಾಯಕ

Webdunia
ಶುಕ್ರವಾರ, 27 ಜನವರಿ 2023 (09:10 IST)
Photo Courtesy: Twitter
ರಾಂಚಿ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಏಕದಿನ ಸರಣಿ ಬಳಿಕ ಇಂದಿನಿಂದ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗುತ್ತಿದೆ.

ಮೊದಲ ಪಂದ್ಯ ಧೋನಿ ತವರು ರಾಂಚಿಯಲ್ಲಿ ನಡೆಯುತ್ತಿದೆ. ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡಿರುವ ಟೀಂ ಇಂಡಿಯಾ ಈಗ ಟಿ20 ಸರಣಿಯಲ್ಲಿ ಯುವ ಪಡೆಯನ್ನು ಪರೀಕ್ಷೆಗೊಳಪಡಿಸಲಿದೆ.

ಇತ್ತೀಚೆಗಿನ ದಿನಗಳಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಯುವ ಪಡೆ ಟಿ20 ಕ್ರಿಕೆಟ್ ನಲ್ಲಿ ಸತತ ಗೆಲುವನ್ನು ಕಾಣುತ್ತಲೇ ಬಂದಿದೆ. ಈ ಬಾರಿ ತವರಿನಲ್ಲೇ ಸರಣಿ ನಡೆಯುತ್ತಿರುವುದರಿಂದ ಗೆಲುವು ಕಷ್ಟವೇನಲ್ಲ. ಬಹಳ ದಿನಗಳ ನಂತರ ಪೃಥ್ವಿ ಶಾ ತಂಡದಲ್ಲಿ ಸ್ಥಾನ ಪಡೆದಿದ್ದು, ಫಾರ್ಮ್ ನಲ್ಲೂ ಇರುವುದರಿಂದ ಆಡುವ ಅವಕಾಶ ಪಡೆಯಬಹುದು. ಅವರ ಜೊತೆಗೆ ಇಶಾನ್ ಕಿಶನ್ ಅಥವಾ ಋತುರಾಜ್ ಗಾಯಕ್ ವಾಡ್ ಓಪನಿಂಗ್ ಮಾಡಬಹುದು. ಮಧ್ಯಮ ಕ್ರಮಾಂಕಕ್ಕೆ ಟಿ20 ಸ್ಪೆಷಲಿಸ್ಟ್ ಸೂರ್ಯಕುಮಾರ್ ಯಾದವ್ ಬಲ.

ಬೌಲಿಂಗ್ ವಿಭಾಗದಲ್ಲಿ ಅರ್ಷ್‍ ದೀಪ್ ಸಿಂಗ್ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದು, ಅವರಿಗೆ ಯುವ ವೇಗಿ ಉಮ್ರಾನ್ ಮಲಿಕ್ ಸಾಥ್ ನೀಡಬಹುದು. ಸ್ಪಿನ್ನರ್ ಗಳ ಪೈಕಿ ಕುಲದೀಪ್ ಯಾದವ್ ಅತ್ಯುತ್ತಮ ಫಾರ್ಮ್ ನಲ್ಲಿರುವುದು ತಂಡಕ್ಕೆ ಪ್ಲಸ್ ಪಾಯಿಂಟ್. ಈ ಪಂದ್ಯ ಸಂಜೆ 7 ಗಂಟೆಗೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments