Webdunia - Bharat's app for daily news and videos

Install App

ಭಾರತ-ಪಾಕ್ ವಿಶ್ವಕಪ್ ಪಂದ್ಯದ ಟಿಕೆಟ್ ಸೋಲ್ಡ್ ಔಟ್: ಬುಕ್ ಮೈ ಶೋ ವಿರುದ್ಧ ಆಕ್ರೋಶ

Webdunia
ಬುಧವಾರ, 30 ಆಗಸ್ಟ್ 2023 (09:00 IST)
Photo Courtesy: Twitter
ಅಹಮ್ಮದಾಬಾದ್: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಭಾರತ-ಪಾಕಿಸ್ತಾನ ನಡುವಿನ ಪಂದ್ಯದ ಟಿಕೆಟ್ ಗಳು ಕೆಲವೇ ನಿಮಿಷಗಳಲ್ಲಿ ಸೋಲ್ಡ್ ಔಟ್ ಆಗಿದೆ.

ಆನ್ ಲೈನ್ ನಲ್ಲಿ ಟಿಕೆಟ್ ಖರೀದಿಸಲು ಬುಕ್ ಮೈ ಶೋನಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ನಿನ್ನೆ ಸಂಜೆ 6 ಗಂಟೆಯಿಂದ ಅಕ್ಟೋಬರ್ 14 ರಂದು ಅಹಮ್ಮದಾಬಾದ್ ನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ಹೈ ವೋಲ್ಟೇಜ್ ಪಂದ್ಯದ ಟಿಕೆಟ್ ಖರೀದಿಗೆ ಬುಕ್ ಮೈ ಶೋನಲ್ಲಿ ಅವಕಾಶ ಕಲ್ಪಿಸಲಾಗಿತ್ತು.

ಹೇಳಿ ಕೇಳಿ, ಭಾರತ-ಪಾಕಿಸ್ತಾನ ಪಂದ್ಯ. ಹೀಗಾಗಿ ನಿರೀಕ್ಷೆಯಂತೇ ಜನ ಪೈಪೋಟಿಗೆ ಬಿದ್ದು ಟಿಕೆಟ್ ಖರೀದಿಗೆ ಮುಂದಾಗಿದ್ದರು. ಆದರೆ ಬುಕ್ ಮೈ ಶೋನಲ್ಲಿ ಟಿಕೆಟ್ ಓಪನ್ ಆದ ಕೆಲವೇ ಕ್ಷಣಗಳಲ್ಲಿ ಸರ್ವರ್ ಸಮಸ್ಯೆಯಿಂದ ಹಲವರಿಗೆ ಟಿಕೆಟ್‍ ಖರೀದಿ ಸಾಧ್ಯವಾಗಿಲ್ಲ. ಈ ನಡುವೆ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ. ಇದರ ಬೆನ್ನಲ್ಲೇ ಬುಕ್ ಮೈ ಶೋ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ವರ್ ಸಮಸ್ಯೆಯಾಗಿದ್ದರೂ ಟಿಕೆಟ್‍ ಸೋಲ್ಡ್ ಔಟ್ ಆಗಿದ್ದು ಹೇಗೆ ಎಂದು ಹಲವರು ಪ್ರಶ್ನಿಸಿದ್ದಾರೆ. ಇದರಲ್ಲಿ ಏನೋ ಗೋಲ್ ಮಾಲ್ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ಬುಕ್ ಮೈ ಶೋ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇಂತಹ ಮಹತ್ವದ ಪಂದ್ಯವಿದ್ದಾಗ ಜನ ಟಿಕೆಟ್ ಗೆ ಮುಗಿಬೀಳುತ್ತಾರೆ ಎಂದು ಮೊದಲೇ ಅಂದಾಜಿದ್ದರೂ ಸೂಕ್ತ ವ್ಯವಸ್ಥೆ ಮಾಡಲಿಲ್ಲ. ಇಂತಹ ಕಳಪೆ ಬುಕ್ ಮೈ ಶೋಗೆ ಟಿಕೆಟ್ ಬುಕ್ ಮಾಡುವ ಅವಕಾಶ ನೀಡಿದ್ದಕ್ಕೆ ಬಿಸಿಸಿಐ, ಐಸಿಸಿಗೆ ಜನ ಹಿಡಿಶಾಪ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments