Webdunia - Bharat's app for daily news and videos

Install App

ಭಾರತ-ದ.ಆಫ್ರಿಕಾ ಪಂದ್ಯಕ್ಕೆ ಮಳೆ ಕಾಟ

Webdunia
ಭಾನುವಾರ, 19 ಜೂನ್ 2022 (20:35 IST)
ಬೆಂಗಳೂರು: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಅಂತಿಮ ಟಿ20 ಪಂದ್ಯಕ್ಕೆ ಮಳೆ ಕಾಟ ಎದುರಾಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಅಪರೂಪಕ್ಕೆ ನಡೆಯುತ್ತಿರುವ ಪಂದ್ಯ ಇದಾಗಿದೆ. ಆದರೆ ವರುಣರಾಯ ಕಳೆದ ಎರಡು ದಿನಗಳಿಂದ ಇಲ್ಲಿ ಎಡೆಬಿಡದೇ ಸುರಿಯುತ್ತಿದ್ದು, ಇಂದೂ ಗುಡುಗು-ಮಿಂಚು ಸಹಿತ ಮಳೆಯಾಗುತ್ತಿದೆ.

ಇದರಿಂದಾಗಿ ತಡವಾಗಿ ಆರಂಭವಾಗಿ 19 ಓವರ್ ಗೆ ಕಡಿತಗೊಂಡಿದ್ದ ಪಂದ್ಯ ಇದೀಗ ಮತ್ತೆ ಅರ್ಧಕ್ಕೆ ನಿಂತಿದೆ. ಇಂದೂ ಕೂಡಾ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆರಂಭಿಸಿ 3.3 ಓವರ್ ಗಳ ಆಟವಾಡಿತ್ತು. ಅಷ್ಟರಲ್ಲೇ 28 ರನ್ ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಋತುರಾಜ್ ಗಾಯಕ್ ವಾಡ್ 10 ಮತ್ತು ಇಶಾನ್ ಕಿಶನ್ 15 ರನ್ ಗಳಿಗೆ ವಿಕೆಟ್ ಒಪ್ಪಿಸಿದ್ದರು. ಶ್ರೇಯಸ್ ಅಯ್ಯರ್ ಖಾತೆ ತೆರೆಯದೇ ಮತ್ತು ರಿಷಬ್ ಪಂತ್ 1 ರನ್ ಗಳಿಸಿ ಕ್ರೀಸ್ ನಲ್ಲಿದ್ದರು. ಇದೀಗ ಮಳೆಯಾಗುತ್ತಿದ್ದು, ಮಳೆ ನಿಲ್ಲುವವರೆಗೂ ಕಾದು ನೋಡುವುದು ಅನಿವಾರ್ಯ. ಒಂದು ವೇಳೆ ಪಂದ್ಯ ನಡೆದರೂ ಓವರ್ ಸಾಕಷ್ಟು ಕಡಿತವಾಗಲಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments