Publish Date: Tue, 04 Oct 2022 (07:50 IST)
Updated Date: Tue, 04 Oct 2022 (08:33 IST)
ಇಂದೋರ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದು ಮೂರನೇ ಮತ್ತು ಅಂತಿಮ ಟಿ20 ಪಂದ್ಯ ನಡೆಯಲಿದ್ದು, ಇಂದಿನ ಪಂದ್ಯಕ್ಕೆ ಪ್ರಮುಖರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ.
ಈಗಾಗಲೇ ಭಾರತ ಸರಣಿ ಗೆದ್ದಿರುವುದರಿಂದ ಇಂದಿನ ಪಂದ್ಯ ಔಪಚಾರಿಕವಾಗಿರಲಿದೆ. ಇನ್ನು, ವಿಶ್ವಕಪ್ ದೃಷ್ಟಿಯಿಂದ ಭಾರತ ತಂಡ ಆಡುವ ಬಳಗದಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಬಹುದು.
ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಅಲ್ಲದೆ ಬೌಲಿಂಗ್ ನಲ್ಲಿ ಶಹಬಾಜ್ ಅಹಮ್ಮದ್, ಮೊಹಮ್ಮದ್ ಸಿರಾಜ್ ಮುಂತಾದ ಯುವ ಪ್ರತಿಭೆಗಳಿಗೆ ಅವಕಾಶ ನೀಡುವ ಸಾಧ್ಯತೆಯಿದೆ.
-Edited by Rajesh Patil