ಕಳಪೆ ವ್ಯವಸ್ಥೆಗೆ ತೊಯ್ದ ಮೈದಾನ: ಮಳೆಯಿಂದ ರದ್ದಾದ ಭಾರತ-ಲಂಕಾ ಮೊದಲ ಟಿ20

Webdunia
ಸೋಮವಾರ, 6 ಜನವರಿ 2020 (08:46 IST)
ಗುವಾಹಟಿ: ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ಒಂದೂ ಎಸೆತ ಕಾಣದೇ ರದ್ದಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ಮಳೆಯ ನಂತರ ಮೈದಾನ ನಿಭಾಯಿಸಲು ಸೂಕ್ತ ವ್ಯವಸ್ಥೆಯಿಲ್ಲದೇ ಸಿಬ್ಬಂದಿ ಹೆಣಗಾಡಿದ ಪರಿಸ್ಥಿತಿ ಎದುರಾಯಿತು.


ಪಂದ್ಯಾರಂಭಕ್ಕೂ ಕೆಲವೇ ಕ್ಷಣಗಳ ಮೊದಲು ತುಂತುರು ಮಳೆ ಆರಂಭವಾಯಿತು. ಹಾಗಿದ್ದರೂ ಮಳೆ ನಿಂತು ಪಂದ್ಯ ನಡೆಯುತ್ತದೆ ಎಂಬ ಆಶಾಭಾವನೆ ಅಭಿಮಾನಿಗಳಲ್ಲಿತ್ತು. ಈ ನಡುವೆ ಟಾಸ್ ನಡೆದು ಭಾರತ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತ್ತು.

ಆದರೆ ಇನ್ನೇನು ಆಟ ಆರಂಭವಾಗಬೇಕೆನ್ನುವಷ್ಟರಲ್ಲಿ ಮಳೆ ಜೋರಾಗಿ ಸುರಿದು ಪಂದ್ಯ ಒಂದೂ ಎಸೆತ ಕಾಣದೇ ರದ್ದಾಯಿತು. ಎಲ್ಲಕ್ಕಿಂತ ಹೆಚ್ಚಾಗಿ ಮೈದಾನ ಒದ್ದೆಯಾಗದಂತೆ ಕವರ್ ಸರಿಯಾಗಿ ಹಾಕಲಾಗದೇ ಸಿಬ್ಬಂದಿಗಳು ಒದ್ದಾಡಿದರು. ಇದರಿಂದಾಗಿ ಪಿಚ್ ಸಂಪೂರ್ಣ ಒದ್ದೆಯಾಗಿದ್ದಲ್ಲದೆ ಕೆಲವೆಡೆ ಕುಳಿಗಳು ಎದ್ದಿದ್ದವು. ವಿಪರ್ಯಾಸವೆಂದರೆ ಇಸ್ತ್ರಿ ಬಾಕ್ಸ್, ವ್ಯಾಕ್ಯೂಮ್ ಕ್ಲೀನರ್ ಹಿಡಿದು ಮೈದಾನ ಒಣಗಿಸಲು ಸಿಬ್ಬಂದಿ ಹರಸಾಹಸ ಪಟ್ಟಿದ್ದು ಕಂಡುಬಂತು. ಇಂತಹದ್ದೊಂದು ಹೀನಾಯ ಸ್ಥಿತಿ ಬಹುಶಃ ಯಾವ ಮೈದಾನದಲ್ಲೂ ಕಂಡಿರಲಿಲ್ಲ. ಇದರಿಂದಾಗಿ ಪಂದ್ಯ ಸಂಪೂರ್ಣವಾಗಿ ರದ್ದಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಯಾಕೆ ಹೀಗೆ ಮಾಡಿದೆ, ಎಲ್ಲರ ಎದುರೇ ವೈಭವ್ ಸೂರ್ಯವಂಶಿಗೆ ಬೈದ ರಿಯಾನ್ ಪರಾಗ್ Video

Video: ಅಯ್ಯೋ ಸೋತೆವಲ್ಲಾ.. ಕಣ್ಣೀರು ಹಾಕಿದ ಬೇಬಿ ಬಾಸ್ ವೈಭವ್ ಸೂರ್ಯವಂಶಿ

ವೈಭವ್ ಸೂರ್ಯವಂಶಿ ಸಕ್ಸಸ್ ಆಗೋದು ಹೇಗೆ: ಈ ವಿಡಿಯೋದಲ್ಲಿ ಪ್ರೂವ್ ಆಯ್ತು Video

IPL 2026: ಶುಭಮನ್‌ ಗಿಲ್‌ ಶತಕಕ್ಕೆ ಒಲಿದ ಜಯ: ಫೈನಲ್‌ನಲ್ಲಿ ಆರ್‌ಸಿಬಿ- ಟೈಟನ್ಸ್‌ ಸೆಣಸಾಟ

ಕಳಪೆ ಪ್ರದರ್ಶನದ ಬಳಿಕ ಎಲ್‌ಎಸ್‌ಜಿ ನಾಯಕತ್ವದಿಂದ ರಿಷಭ್‌ ಪಂತ್‌ಗೆ ಗೇಟ್‌ಪಾಸ್‌

ಮುಂದಿನ ಸುದ್ದಿ
Show comments