19 ವರ್ಷದೊಳಗಿನವರ ಏಷ್ಯಾಕಪ್‌ ಫೈನಲ್‌ನಲ್ಲಿ ಮುಗ್ಗರಿಸಿದ ಭಾರತ: ಬಾಂಗ್ಲಾದೇಶಕ್ಕೆ ಕಿರೀಟ

Sampriya
ಭಾನುವಾರ, 8 ಡಿಸೆಂಬರ್ 2024 (18:27 IST)
Photo Courtesy X
ದುಬೈ: ಹಾಲಿ ಚಾಂಪಿಯನ್‌ ಬಾಂಗ್ಲಾದೇಶ ತಂಡವು ಏಷ್ಯಾಕಪ್ 19 ವರ್ಷದೊಳಗಿನವರ ಏಕದಿನ ಕ್ರಿಕೆಟ್ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ ತಂಡವನ್ನು 59 ರನ್‌ಗಳಿಂದ ಮಣಿಸಿ ಸತತ ಎರಡನೇ ಬಾರಿಗೆ ಕಿರೀಟ ಮುಡಿಗೇರಿಸಿಕೊಂಡಿದೆ.

ಟಾಸ್‌ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಬಾಂಗ್ಲಾದೇಶ, 49.1 ಓವರ್‌ಗಳಲ್ಲಿ 198 ರನ್‌ ಗಳಿಸಿ ಆಲೌಟ್‌ ಆಗಿತ್ತು. ಇದಕ್ಕುತ್ತರವಾಗಿ ಇನಿಂಗ್ಸ್‌ ಆರಂಭಿಸಿದ ಭಾರತ, 35.2 ಓವರ್‌ಗಳಲ್ಲಿ 139 ರನ್‌ ಗಳಿಸಿ ಸರ್ವಪತನ ಕಂಡಿತು.


ಭಾರತದ ಬ್ಯಾಟರ್‌ಗಳು ದಿಟ್ಟ ಆಟವಾಡುವಲ್ಲಿ ವಿಫಲರಾದರು. ಆರಂಭಿಕ ಆಟಗಾರರಾದ ಆಯುಷ್‌ ಮ್ಹಾತ್ರೆ ಮತ್ತು ವೈಭವ್‌ ಸೂರ್ಯವಂಶಿ, ತಂಡದ ಮೊತ್ತ 24 ರನ್‌ ಆಗುವಷ್ಟರಲ್ಲೇ ಪೆವಿಲಿಯನ್‌ಗೆ ವಾಪಸ್‌ ಆದರು. ನಂತರವೂ ದೊಡ್ಡ ಇನಿಂಗ್ಸ್ ಕಟ್ಟಲು ಯಾರಿಂದಲೂ ಸಾಧ್ಯವಾಗಲಿಲ್ಲ.


ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾ ಪಡೆಗೂ ಉತ್ತಮ ಆರಂಭ ಸಿಗಲಿಲ್ಲ. ಮೊಹಮ್ಮದ್‌ ಶಿಹಾಬ್‌ ಜೇಮ್ಸ್‌ (40 ರನ್‌) ಮತ್ತು ಮೊಹಮ್ಮದ್‌ ರಿಜಾನ್‌ ಹೊಸಾನ್‌ (47 ರನ್‌) 4ನೇ ವಿಕೆಟ್‌ ಪಾಲುದಾರಿಕೆಯಲ್ಲಿ ತಂಡಕ್ಕೆ ಚೇತರಿಕೆ ನೀಡಿದರು. ವಿಕೆಟ್‌ ಕೀಪರ್‌ ಮಹಮ್ಮದ್‌ ಪರಿದ್‌ ಹಸನ್‌ ಪಯ್ಸಾಲ್‌ ಸಹ (39 ರನ್‌) ಉಪಯುಕ್ತ ಆಟವಾಡಿದರು. ಹೀಗಾಗಿ ತಂಡದ ಮೊತ್ತ ಇನ್ನೂರರ ಸನಿಹಕ್ಕೆ ತಲುಪಲು ಸಾಧ್ಯವಾಯಿತು.

ಏಷ್ಯಾಕಪ್ 19 ವರ್ಷದೊಳಗಿನವರ ಟೂರ್ನಿಗಳಲ್ಲಿ ಭಾರತ ಏಳು ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಬಾಂಗ್ಲಾ ಪಡೆ ಎರಡು ಸಲ ಮತ್ತು ಅಫ್ಗಾನಿಸ್ತಾನ ಒಂದು ಬಾರಿ ಗೆದ್ದಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಸಮಯ ವಿವರ ಇಲ್ಲಿದೆ

ಮೊಹಮ್ಮದ್ ಶಮಿ ಫಿಟ್ನೆಸ್ ಬಗ್ಗೆ ಹೊರಗೊಂದು ಒಳಗೊಂದು ಹೇಳುತ್ತಿದ್ದಾರಾ

ಆರ್ ಸಿಬಿಗೆ ಹೊಸ ಮಾಲಿಕರು ಬಂದರೆ ಹೆಸರೂ ಬದಲಾಗುತ್ತಾ

ರವೀಂದ್ರ ಜಡೇಜಾರನ್ನು ಸೇಲ್ ಮಾಡಲು ಹೊರಟ ಸಿಎಸ್ ಕೆ: ಸ್ವಲ್ಪವಾದ್ರೂ ಕೃತಜ್ಞತೆ ಬೇಡ್ವಾ ಫ್ಯಾನ್ಸ್ ಗರಂ

ಗಾಯಗೊಂಡು ತಂಡದಿಂದ ಹೊರಬಿದ್ದರೂ ಪ್ರತೀಕಾ ರಾವಲ್‌ಗೆ ಚಿನ್ನ ಪದಕ ಸಿಗಲು ಇವರ ಕೃಪೆಯೇ ಕಾರಣ

ಮುಂದಿನ ಸುದ್ದಿ
Show comments