Webdunia - Bharat's app for daily news and videos

Install App

ಸೆ. 15ರೊಳಗೆ ಟೀಂ ಇಂಡಿಯಾಗೆ ಬೆಂಬಲ ಸಿಬ್ಬಂದಿ ನೇಮಕ: ಠಾಕುರ್

Webdunia
ಸೋಮವಾರ, 18 ಜುಲೈ 2016 (14:07 IST)
ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕುರ್ ಸೆ. 15ರೊಳಗೆ ಟೀಂ ಇಂಡಿಯಾಗೆ ಬೆಂಬಲ ಸಿಬ್ಬಂದಿಯನ್ನು ಆಯ್ಕೆ ಮಾಡಲಾಗುತ್ತದೆಂದು ದೃಢಪಡಿಸಿದ್ದಾರೆ. ತಂಡವು ವೆಸ್ಟ್ ಇಂಡೀಸ್ ಪ್ರವಾಸದಿಂದ ಮರಳಿದ ಬಳಿಕ ಹೆಡ್ ಕೋಚ್ ಅನಿಲ್ ಕುಂಬ್ಳೆ ಮತ್ತು ತಂಡದ ಇತರೆ ಸದಸ್ಯರ ಜತೆ ಸಭೆ ನಡೆಸಿ ಬೌಲಿಂಗ್, ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಕೋಚ್ ಹಾಗೂ ಇತರೆ ಬೆಂಬಲ ಸಿಬ್ಬಂದಿಯನ್ನು ನೇಮಕ ಮಾಡಲಾಗುತ್ತದೆ ಎಂದು ಹೇಳಿದರು.
 
ಇಷಾ ಯೋಗ ಕೇಂದ್ರದಲ್ಲಿ  2 ದಿನಗಳ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಠಾಕುರ್ ಕೊಯಮತ್ತೂರಿನಲ್ಲಿದ್ದರು. ಕುಂಬ್ಳೆ ಅವರನ್ನು ಒಂದು ವರ್ಷಕ್ಕೆ ಹೆಡ್ ಕೋಚ್ ಆಗಿ ಆಯ್ಕೆ ಮಾಡಿದ ಕುರಿತು ಹೇಳುತ್ತಾ ಅವರ ಸಾಧನೆಯ ಆಧಾರದ ಮೇಲೆ ಗುತ್ತಿಗೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
 
ಈ ವರ್ಷದ ಕೊನೆಯಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಯಾವುದೇ ಹಗಲು ರಾತ್ರಿ ಟೆಸ್ಟ್ ಪಂದ್ಯ ನಡೆಯುವುದಿಲ್ಲ ಎಂದು ಠಾಕುರ್ ಖಚಿತಪಡಿಸಿದರು. ನ್ಯೂಜಿಲೆಂಡ್ ಪ್ರವಾಸದಲ್ಲಿ ಬರೀ ದಿನದ ಪಂದ್ಯಗಳನ್ನು ಆಡಿಸಲಾಗುತ್ತದೆ. ದುಲೀಪ್ ಟ್ರೋಫಿಗೆ ಮಾತ್ರ ನಸುಗೆಂಪು ಬಣ್ಣದ ಚೆಂಡುಗಳನ್ನು ಬಳಸಲಾಗುತ್ತಿದ್ದು ಅದು ಹಗಲು ರಾತ್ರಿ ಪಂದ್ಯವಾಗಲಿದೆ ಎಂದು ಠಾಕುರ್ ಹೇಳಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್‌ಗೆ ಗುಡ್‌ಬೈ ಹೇಳಲು ಬಯಸಿದ್ದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

Virat Kohli: ಭಾರತ ಪಾಕಿಸ್ತಾನ ಬಗ್ಗೆ ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ ಹೇಳಿದ್ದೇನು

IPL 2025: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

ಮುಂದಿನ ಸುದ್ದಿ
Show comments