ಭಾರತ-ವಿಂಡೀಸ್ ಅಂತಿಮ ಏಕದಿನ ಇಂದು: ಪ್ರಯೋಗ ಕೈಬಿಡುತ್ತಾ ರೋಹಿತ್ ಪಡೆ?

Webdunia
ಮಂಗಳವಾರ, 1 ಆಗಸ್ಟ್ 2023 (08:10 IST)
ಬಾರ್ಬಡೋಸ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಮೂರನೇ ಮತ್ತು ಸರಣಿ ನಿರ್ಣಾಯಕ ಕೊನೆಯ ಏಕದಿನ ಪಂದ್ಯ ನಡೆಯಲಿದೆ.

ಕಳೆದೆರಡು ಪಂದ್ಯಗಳಲ್ಲಿ ಟೀಂ ಇಂಡಿಯಾ ಅತಿಯಾದ ಪ್ರಯೋಗ ಮಾಡಿ ಕೈ ಸುಟ್ಟುಕೊಂಡಿದೆ. ಜೊತೆಗೆ ದ್ರಾವಿಡ್-ರೋಹಿತ್ ಬಳಗದ ಪ್ರಯೋಗಕ್ಕೆ ತೀವ್ರ ಆಕ್ರೋಶ ಕೂಡಾ ವ್ಯಕ್ತವಾಗಿದೆ. ಸರಣಿ ಈಗ 1-1 ರಿಂದ ಸಮಬಲಗೊಂಡಿರುವುದರಿಂದ ಇಂದಿನ ಪಂಧ್ಯ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಕಳೆದ ಎರಡು ಪಂದ್ಯಗಳಲ್ಲಿ ಸ್ಟಾರ್ ಬ್ಯಾಟಿಗ ವಿರಾಟ್ ಕೊಹ್ಲಿಗೆ ಬ್ಯಾಟಿಂಗ್ ಅವಕಾಶ ಸಿಕ್ಕಿರಲಿಲ್ಲ.  ಹೀಗಾಗಿ ಈ ಪಂದ್ಯದಲ್ಲಿ ಕೊಹ್ಲಿ ಬ್ಯಾಟಿಂಗ್ ಗೆ ಅವಕಾಶ ಸಿಗಬಹುದು ಎಂದು ನಿರೀಕ್ಷಿಸಲಾಗಿದೆ. ಕೊಹ್ಲಿ ಮತ್ತು ರೋಹಿತ್ ಪುನರಾಗಮನವಾದರೆ ಸಂಜು ಸ್ಯಾಮ್ಸನ್, ಅಕ್ಸರ್ ಪಟೇಲ್ ಮತ್ತೆ ಹೊರಗುಳಿಯಬಹುದು. ರವೀಂದ್ರ ಜಡೇಜಾ ಅಥವಾ ಕುಲದೀಪ್ ಯಾದವ್ ಗೆ ವಿಶ್ರಾಂತಿ ನೀಡಿ ಯಜುವೇಂದ್ರ ಚಾಹಲ್ ಗೆ ಅವಕಾಶ ನೀಡಿದರೂ ಅಚ್ಚರಿಯಿಲ್ಲ. ಅತ್ತ ಕಳೆದ ಪಂದ್ಯದಲ್ಲಿ ಸಿಕ್ಕ ಗೆಲುವು ವಿಂಡೀಸ್ ಆತ್ಮವಿಶ್ವಾಸ ಹೆಚ್ಚಿಸಿದೆ. ವಿಶೇಷವಾಗಿ ನಾಯಕನ ಆಟವಾಡುತ್ತಿರುವ ಶೈ ಹೋಪ್ಸ್ ಎರಡೂ ಪಂದ್ಯಗಳಲ್ಲಿ ತಂಡದ ಬ್ಯಾಟಿಂಗ್ ಆಧಾರ ಸ್ತಂಬವಾಗಿದ್ದಾರೆ. ಹೀಗಾಗಿ ಇಂದಿನ ಪಂದ್ಯವನ್ನು ಭಾರತ ಹಗುರವಾಗಿ ಕಾಣುವಂತಿಲ್ಲ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಸಂಜೆ 7 ಗಂಟೆಗೆ ಆರಂಭವಾಗುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹನುಮಾನ್ ಚಾಲೀಸಾ ಬಗ್ಗೆ ಹಾರ್ದಿಕ್ ಪಾಂಡ್ ಏನ್ ಹೇಳಿದ್ರು ನೋಡಿ

IPL 2026: ಸ್ಟಾರ್ ವೇಗಿ ಯಶ್ ದಯಾಳ್ ರನ್ನು ತಂಡದಿಂದ ಕೈ ಬಿಟ್ಟ ಆರ್ ಸಿಬಿ

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮೃತರಾದವರ ಸ್ಮರಣಾರ್ಥ ಮಹತ್ವದ ನಿರ್ಧಾರ ಕೈಗೊಂಡ ಕೆಎಸ್ ಸಿಎ

IPL 2026: ಆರ್ ಸಿಬಿ ಟಿಕೆಟ್ ದರ ಕೇಳಿದ್ರೆ ಶಾಕ್ ಆಗ್ತೀರಿ: ಇದು ಚಿನ್ನಸ್ವಾಮಿಯಲ್ಲಿ ಮ್ಯಾಚ್ ಜನ ಸಾಮಾನ್ಯರಿಗಲ್ಲ

ಫೆರಾರಿ ಕಾರಿನಲ್ಲೂ ಹನುಮಾನ್ ಚಾಲಿಸಾ ಕೇಳುತ್ತಿರುತ್ತೇನೆ: ಹಾರ್ದಿಕ್ ಪಾಂಡ್ಯ Video

ಮುಂದಿನ ಸುದ್ದಿ
Show comments