Publish Date: Sat, 27 Oct 2018 (13:21 IST)
Updated Date: Sat, 27 Oct 2018 (13:25 IST)
ಪುಣೆ: ಇಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ಭಾರತ ಈ ಪಂದ್ಯಕ್ಕೆ ಮೂರು ಬದಲಾವಣೆ ಮಾಡಿಕೊಂಡಿದ್ದು, ಉಮೇಶ್ ಯಾದವ್, ಮೊಹಮ್ಮದ್ ಶಮಿ, ರವೀಂದ್ರ ಜಡೇಜಾರನ್ನು ಹೊರಗಿಟ್ಟು, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಮತ್ತು ಖಲೀಲ್ ಮೊಹಮ್ಮದ್ ಗೆ ಸ್ಥಾನ ನೀಡಿದೆ. ಇದರಿಂದ ಭಾರತ ಹೊಸ ಬೌಲಿಂಗ್ ಪಡೆಯೊಂದಿಗೆ ಕಣಕ್ಕಿಳಿದಿದೆ.
ಕೇದಾರ್ ಜಾದವ್ ಬಗ್ಗೆ ಮಾತನಾಡಿರುವ ವಿರಾಟ್ ಕೊಹ್ಲಿ ಅವರು ಫಿಟ್ ಇಲ್ಲದೇ ಇರುವುದರಿಂದ ಈ ಪಂದ್ಯಕ್ಕೆ ಹೊರಗಿಡಲಾಗಿದ್ದು, ಮುಂದಿನ ಪಂದ್ಯದಿಂದ ಆಡಲಿದ್ದಾರೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.