INDvAFG T20: ಬೆಂಗಳೂರು ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆ ಸಾಧ್ಯತೆ

Krishnaveni K
ಮಂಗಳವಾರ, 16 ಜನವರಿ 2024 (08:20 IST)
ಬೆಂಗಳೂರು: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆಗಳಾಗುವ ಸಾಧ‍್ಯತೆಯಿದೆ.

ಈಗಾಗಲೇ ನಡೆದಿರುವ ಎರಡೂ ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಸರಣಿ ತನ್ನದಾಗಿಸಿಕೊಂಡಿದೆ. ನಾಳೆ ನಡೆಯಲಿರುವ ಅಂತಿಮ ಪಂದ್ಯವನ್ನೂ ಗೆದ್ದು ಅಫ್ಘಾನಿಸ್ತಾನ ವಿರುದ್ಧ ಸರಣಿ ವೈಟ್ ವಾಶ್ ಮಾಡುವ ತವಕದಲ್ಲಿ ಟೀಂ ಇಂಡಿಯಾಗಿದೆ.

ಆದರೆ ಈಗಾಗಲೇ ಸರಣಿ ಗೆದ್ದಿರುವುದರಿಂದ ಮುಂಬರುವ ವಿಶ್ವಕಪ್ ದೃಷ್ಟಿಯಲ್ಲಿಟ್ಟುಕೊಂಡು ತಂಡದಲ್ಲಿ ಅವಕಾಶ ಸಿಗದ ಪ್ರತಿಭಾವಂತರಿಗೆ ಈ ಪಂದ್ಯದಲ್ಲಿ ಅವಕಾಶ ಸಿಗುವ ಸಾಧ್ಯತೆಯಿದೆ. ಹೀಗಾಗಿ ಈ ಮೊದಲು ಆಡಿದ ಮೂರು ಆಟಗಾರರಿಗೆ ಕೊನೆಯ ಪಂದ್ಯಕ್ಕೆ ವಿಶ್ರಾಂತಿ ಸಿಗುವ ಸಾ‍ಧ್ಯತೆಯಿದೆ.

ಕಳೆದ ಎರಡು ಪಂದ್ಯಗಳಲ್ಲಿ ವಿಕೆಟ್ ಕೀಪರ್ ಆಗಿ ಜಿತೇಶ್ ಶರ್ಮ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಗೆ ಅವಕಾಶ ಸಿಗುವ ಸಾಧ‍್ಯತೆಯಿದೆ. ಇನ್ನು, ಬೌಲಿಂಗ್ ವಿಭಾಗದಲ್ಲಿ ಕುಲದೀಪ್ ಯಾದವ್ ಮತ್ತು ಆವೇಶ್ ಖಾನ್ ಗೆ ಅವಕಾಶ ಸಿಗುವ ಸಾಧ್ಯತೆಯಿದೆ. ಅವರ ಸ್ಥಾನದಲ್ಲಿ ರವಿ ಬಿಷ್ಣೋಯ್ ಮತ್ತು ಮುಕೇಶ್ ಕುಮಾರ್ ಬೆಂಚ್ ಕಾಯಿಸುವ ಸಾ‍ಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments