Webdunia - Bharat's app for daily news and videos

Install App

IND v/s SA Boxing Day test: ಟಾಸ್ ಗೆದ್ದ ಆಫ್ರಿಕಾ, ಟೀಂ ಇಂಡಿಯಾ ಪರ ಪ್ರಸಿದ್ಧ ಕೃಷ್ಣ ಡೆಬ್ಯೂಟ್

Webdunia
ಮಂಗಳವಾರ, 26 ಡಿಸೆಂಬರ್ 2023 (13:54 IST)
ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಫ್ರಿಕಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಟೀಂ ಇಂಡಿಯಾ ಪರ ಈ ಪಂದ್ಯದ ಮೂಲಕ ಕನ್ನಡಿಗ ವೇಗಿ ಪ್ರಸಿದ್ಧ ಕೃಷ್ಣ ಪದಾರ್ಪಣೆ ಮಾಡಿದ್ದಾರೆ. ಅವರಿಗೆ ಜಸ್ಪ್ರೀತ್ ಬುಮ್ರಾ ಕ್ಯಾಪ್ ನೀಡಿ ಗೌರವಿಸಿದರು. ಮಳೆ ಬಂದು ಮೈದಾನ ಒದ್ದೆಯಾಗಿದ್ದರಿಂದ 15 ನಿಮಿಷ ತಡವಾಗಿ ಟಾಸ್ ನಡೆಯಿತು.

ಭಾರತ ತಂಡದಲ್ಲಿ ರವೀಂದ್ರ ಜಡೇಜಾಗೆ ವಿಶ್ರಾಂತಿ ನೀಡಲಾಗಿದೆ. ಬೆನ್ನು ನೋವಿನಿಂದ ಬಳಲುತ್ತಿರುವ ಕಾರಣಕ್ಕೆ ಜಡೇಜಾರನ್ನು ಹೊರಗಿಡಲಾಗಿದೆ ಎಂದು ನಾಯಕ ರೋಹಿತ್ ತಿಳಿಸಿದ್ದಾರೆ. ಹಿರಿಯ ಸ್ಪಿನ್ನರ್ ಅಶ್ವಿನ್ ರನ್ನು ಉಳಿಸಿಕೊಳ್ಳಲಾಗಿದೆ. ವೇಗದ ಬೌಲಿಂಗ್ ನಾಲ್ವರು ಕಣಕ್ಕಿಳಿಯುತ್ತಿದ್ದಾರೆ. ಬ್ಯಾಟಿಂಗ್ ನಲ್ಲಿ ರೋಹಿತ್ ಜೊತೆಗೆ ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಗಿಲ್ ಮೂರು ಮತ್ತು ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ವಿಕೆಟ್ ಕೀಪರ್ ಆಗಿ ನಿರೀಕ್ಷೆಯಂತೇ ಕೆಎಲ್ ರಾಹುಲ್ ಗೆ ಅವಕಾಶ ಸಿಕ್ಕಿದೆ. ಉಳಿದಂತೆ ಶ್ರೇಯಸ್ ಅಯ್ಯರ್ ತಂಡದಲ್ಲಿದ್ದಾರೆ.

ಭಾರತ ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ವಾಷಿಂಗ್ಟನ್ ಸುಂದರ್ ಎಷ್ಟು ಚೆಂದ ಕನ್ನಡ ಮಾತಾಡ್ತಾರೆ ನೋಡಿ

ಬಾಯ್ಕಾಟ್ ಎನ್ನುತ್ತಿದ್ದರೂ ಭಾರತ ಪಾಕಿಸ್ತಾನ ಮ್ಯಾಚ್ ಟಿಕೆಟ್ ಗೆ ಭರ್ಜರಿ ಬೆಲೆ

Asia Cup Cricket: ಯುಎಇ ನೀಡಿದ ಗುರಿಯನ್ನು ನಾಲ್ಕೇ ಓವರ್ ಗಳಲ್ಲಿ ಚಚ್ಚಿದ ಬಿಸಾಕಿದ ಟೀಂ ಇಂಡಿಯಾ

ಕ್ರಿಕೆಟಿಗ ಪೃಥ್ವಿ ಶಾಗೆ ಕೋರ್ಟ್‌ನಿಂದ ಬಿತ್ತು ₹100ದಂಡ, ಪ್ರಕರಣ ಹಿನ್ನೆಲೆ ಏನ್‌ ಗೊತ್ತಾ

Asia cup cricket: ದುಬೈನಲ್ಲಿ ಟಾಸ್ ಗೆದ್ದರೆ ಭಾರತ ಮೊದಲು ಏನು ಮಾಡಬೇಕು

ಮುಂದಿನ ಸುದ್ದಿ
Show comments