Webdunia - Bharat's app for daily news and videos

Install App

IND vs SL ODI: ಟೀಂ ಇಂಡಿಯಾಕ್ಕೆ ಇಂದು ಶ್ರೀಲಂಕಾ ವಿರುದ್ಧ ಗೆಲ್ಲಲೇಬೇಕು: ತಂಡದಲ್ಲಿ ಈ ಬದಲಾವಣೆ ಸಾಧ್ಯತೆ

Krishnaveni K
ಬುಧವಾರ, 7 ಆಗಸ್ಟ್ 2024 (08:50 IST)
ಕೊಲಂಬೊ: ಭಾರತ ಮತ್ತು ಶ್ರೀಲಂಕಾ ನಡುವೆ ಇಂದು ಮೂರನೇ ಮತ್ತು ಅಂತಿಮ ಏಕದಿನ ಪಂದ್ಯ ನಡೆಯಲಿದ್ದು, ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿ ಭಾರತ ತಂಡವಿದೆ.

ಈ ಸರಣಿಯ ಮೊದಲ ಪಂದ್ಯ ಟೈ ಆಗಿತ್ತು. ಎರಡನೇ ಪಂದ್ಯವನ್ನು ಲಂಕಾ ಗೆದ್ದುಕೊಂಡಿತ್ತು. ಈ ಎರಡೂ ಪಂದ್ಯಗಳಲ್ಲಿ ಲಂಕಾ ಮೊದಲು ಬ್ಯಾಟಿಂಗ್ ಮಾಡಿತ್ತು ಎಂಬುದು ಗಮನಿಸಬೇಕಾದ ಅಂಶ. ಇದೀಗ ಮೂರನೇ ಪಂದ್ಯದಲ್ಲಿ ಭಾರತ ಗೆಲ್ಲದೇ ಹೋದರೆ ಸರಣಿ ಕಳೆದುಕೊಳ್ಳಲಿದೆ.

 ಈ ಪಂದ್ಯಕ್ಕೆ ರಿಷಬ್ ಪಂತ್ ರನ್ನು ಕರೆತರಲು ಒತ್ತಡವಿದೆ. ಒಂದು ವೇಳೆ ಪಂತ್ ಗೆ ಅವಕಾಶ ನೀಡುವುದಿದ್ದರೆ ಕೆಎಲ್ ರಾಹುಲ್ ಬೆಂಚ್ ಕಾಯಿಸಬೇಕಾದೀತು. ಅಥವಾ ಹೇಳಿಕೊಳ್ಳುವಂತಹ ರನ್ ಗಳಿಸದೇ ಇರುವ ಶುಬ್ಮನ್ ಗಿಲ್ ರನ್ನು ಹೊರಗಿಟ್ಟು ರಾಹುಲ್ ರನ್ನು ಆರಂಭಿಕರಾಗಿ ಆಡಿಸಬೇಕಾದೀತು. ಉಳಿದಂತೆ ಬ್ಯಾಟಿಂಗ್ ನಲ್ಲಿ ಯಾವುದೇ ಬದಲಾವಣೆಯಿರದು.

ಬೌಲಿಂಗ್ ನಲ್ಲಿ ವಾಷಿಂಗ್ಟನ್ ಸುಂದರ್ ಕಳೆದ ಎರಡೂ ಪಂದ್ಯಗಳಲ್ಲಿ ಮಿಂಚಿದ್ದಾರೆ. ಅವರಿಗೆ ಅಕ್ಸರ್ ಪಟೇಲ್, ಕುಲದೀಪ್ ಕೂಡಾ ಸಾಥ್ ನೀಡುತ್ತಿದ್ದಾರೆ. ಬೌಲಿಂಗ್ ಬಗ್ಗೆ ಕಳೆದ ಎರಡೂ ಪಂದ್ಯಗಳಲ್ಲಿ ನಾಯಕ ರೋಹಿತ್ ಶರ್ಮಾಗೆ ತೃಪ್ತಿಯಿರಬಹುದು. ಆದರೆ ಬ್ಯಾಟಿಗರು ಅದರಲ್ಲೂ ಅಗ್ರ ಬ್ಯಾಟಿಗರಾದ ಕೊಹ್ಲಿ, ಗಿಲ್, ಶ್ರೇಯಸ್, ರಾಹುಲ್ ಖ್ಯಾತಿಗೆ ತಕ್ಕ ಆಟವಾಡಬೇಕಿದೆ. ಕಳೆದ ಎರಡೂ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿ ಗೆದ್ದಿದ್ದ ಲಂಕಾ ರನ್ ಚೇಸ್ ಅವಕಾಶ ಸಿಕ್ಕರೆ ಹೇಗೆ ಆಡಬಹುದು ಎಂಬ ಕುತೂಹಲವಿದೆ. ಈ ಪಂದ್ಯ ಅಪರಾಹ್ನ 2.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments