Webdunia - Bharat's app for daily news and videos

Install App

ಹೊಸ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಗೆ ಮೊದಲ ಪತ್ರಿಕಾಗೋಷ್ಠಿಯಲ್ಲೇ ಅವಮಾನ!

Webdunia
ಗುರುವಾರ, 23 ನವೆಂಬರ್ 2023 (09:38 IST)
Photo Courtesy: Twitter
ವಿಶಾಖಪಟ್ಟಣಂ: ಇತ್ತೀಚೆಗಷ್ಟೇ ವಿಶ್ವಕಪ್ ಫೈನಲ್ ಸೋಲಿನ ಹತಾಶೆ ಒಂದೆಡೆಯಾದರೆ ಇದೀಗ ಅದೇ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಯುವ ಪಡೆ ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಟಿ20 ಸರಣಿ ಆಡಲು ಸಜ್ಜಾಗಿದೆ.

ಇಂದಿನಿಂದ ಐದು ಪಂದ್ಯಗಳ ಸರಣಿ ಆರಂಭವಾಗಲಿದೆ. ಮೊದಲ ಪಂದ್ಯ ಇಂದು ವಿಶಾಖಪಟ್ಟಣಂನಲ್ಲಿ ನಡೆಯುವುದು. ಇದಕ್ಕಾಗಿ ನಿನ್ನೆಯೇ ಟೀಂ ಇಂಡಿಯಾ ಹಂಗಾಮಿ ಕೋಚ್ ವಿವಿಎಸ್ ಲಕ್ಷ್ಮಣ್ ನೇತೃತ್ವದಲ್ಲಿ ಅಭ್ಯಾಸವನ್ನೂ ನಡೆಸಿದೆ.

ಆದರೆ ಈ ನಡುವೆ ಸಂಪ್ರದಾಯದಂತೆ ಪತ್ರಿಕಾಗೋಷ್ಠಿಗೆ ಬಂದಿದ್ದ ನಾಯಕ ಸೂರ್ಯಕುಮಾರ್ ಯಾದವ್ ನಿಜಕ್ಕೂ ದಂಗಾಗಿದ್ದಾರೆ. ಅವರ ಪತ್ರಿಕಾಗೋಷ್ಠಿಗೆ ಕೇವಲ ಇಬ್ಬರು ಪತ್ರಕರ್ತರು ಮಾತ್ರ ಆಗಮಿಸಿದ್ದರು. ಪತ್ರಕರ್ತರ ಸಂಖ್ಯೆ ನೋಡಿ ಸೂರ್ಯಗೇ ದಂಗಾಗಿದೆ. ಜೊತೆಗೆ ಒಂದು ರೀತಿಯ ಅವಮಾನವಾಗಿದೆ.

ಇತ್ತೀಚೆಗಷ್ಟೇ ನಡೆದ ವಿಶ್ವಕಪ್ ಫೈನಲ್ ಸೋಲಿನ ನೋವು ಇನ್ನೂ ಮಾಸಿಲ್ಲ. ಅದು ಕ್ರೀಡಾ ಪತ್ರಕರ್ತರಲ್ಲೂ ಇದೆ. ಹೀಗಿರುವಾಗ ಮತ್ತೊಮ್ಮೆ ಅದೇ ಆಸ್ಟ್ರೇಲಿಯಾ ವಿರುದ್ಧ ಸರಣಿ ಬಗ್ಗೆ ಯಾರಿಗೂ ಆಸಕ್ತಿ ಇಲ್ಲವಾಗಿದೆ. ಹೀಗಾಗಿ ಪತ್ರಕರ್ತರೂ ಈ ಪತ್ರಿಕಾಗೋಷ್ಠಿಗೆ ಬರಲು ಆಸಕ್ತಿ ತೋರಿಸಿಲ್ಲ. ಇದೇ ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕತ್ವ ವಹಿಸಿಕೊಂಡಿರುವ ಸೂರ್ಯಕುಮಾರ್ ಗೆ ಇದು ಒಂದು ರೀತಿಯ ಅವಮಾನವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments