Webdunia - Bharat's app for daily news and videos

Install App

ಐಪಿಎಲ್ 2024: ಪಂದ್ಯ ಮುಗಿದ ಬಳಿಕ ಧೋನಿಗೆ ಮುತ್ತಿಗೆ ಹಾಕಿದ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರರು

Krishnaveni K
ಸೋಮವಾರ, 1 ಏಪ್ರಿಲ್ 2024 (13:58 IST)
Phot Courtesy: CSK

ವಿಶಾಖಪಟ್ಟಣಂ: ಐಪಿಎಲ್ 2024 ರಲ್ಲಿ ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಬಳಿಕ ಡೆಲ್ಲಿ ಆಟಗಾರರು ಧೋನಿ ಬಳಿ ಸಲಹೆ ಸೂಚನೆ ಕೇಳುತ್ತಿದ್ದರು.


ಪ್ರತೀ ಪಂದ್ಯ ಮುಗಿದ ಬಳಿಕವೂ ಯುವ ಆಟಗಾರರು ಧೋನಿ ಬಳಿಕ ಬಂದು ಸಲಹೆ ಪಡೆಯುವುದು ಸಾಮಾನ್ಯ. ನಿನ್ನೆಯ ಪಂದ್ಯದಲ್ಲಿಯೂ ಅದೇ ನಡೆದಿದೆ. ಧೋನಿ ನಿನ್ನೆ ಅಜೇಯರಾಗಿ 37 ರನ್ ಗಳಿಸಿದ್ದರು. ಅವರ ಸಿಡಿಲಬ್ಬರ ಬ್ಯಾಟಿಂಗ್ ಹೊರತಾಗಿಯೂ ಸಿಎಸ್ ಕೆ ಪಂದ್ಯ ಸೋತಿತ್ತು.

ಆದರೆ ಧೋನಿ ಪೆವಿಲಿಯನ್ ಕಡೆಗೆ ಹೆಜ್ಜೆ ಹಾಕುವಾಗ ಡೆಲ್ಲಿ ವೇಗಿ ಇಶಾನ್ ಕಿಶನ್ ಮಾತುಕತೆ ನಡೆಸಿದ್ದಾರೆ. ಇದಾದ ಬಳಿಕ ಡೆಲ್ಲಿಯ ಕೆಲವು ಆಟಗಾರರು ಧೋನಿಗೆ ಮುತ್ತಿಕೊಂಡು ಪಾಠ ಹೇಳಿಸಿಕೊಂಡಿದ್ದಾರೆ. ಇದು ಇಷ್ಟಕ್ಕೇ ಮುಗಿಯಲಿಲ್ಲ.

ಟೀಂ ಇಂಡಿಯಾದ ಪ್ರಮುಖ ಸ್ಪಿನ್ನರ್ ಕೂಡಾ ಆಗಿರುವ ಡೆಲ್ಲಿ ತಂಡದ ಕುಲದೀಪ್ ಯಾದವ್ ಧೋನಿ ಬಳಿ ಸುದೀರ್ಘ ಮಾತುಕತೆ ನಡೆಸಿದರು. ಧೋನಿ ನಾಯಕತ್ವದಲ್ಲೇ ಕುಲದೀಪ್ ಟೀಂ ಇಂಡಿಯಾದಲ್ಲಿ ಬೆಳಕಿಗೆ ಬಂದಿದ್ದರು. ಧೋನಿಯನ್ನು ಕುಲದೀಪ್ ಅಷ್ಟೇ ಗೌರವದಿಂದ ನೋಡುತ್ತಾರೆ. ಇದೀಗ ಐಪಿಎಲ್ ಪಂದ್ಯದ ವೇಳೆಯೂ ತಮ್ಮ ಐಡಲ್ ನಿಂದ ಸಲಹೆ ಪಡೆದಿದ್ದಾರೆ ಕುಲದೀಪ್‍.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments