Webdunia - Bharat's app for daily news and videos

Install App

ಇಂದು ಚಿನ್ನಸ್ವಾಮಿಯಲ್ಲಿ ಆಟ ನಡೆಯುವುದು ಖಂಡಿತಾ: ಆರ್ ಸಿಬಿ ಫ್ಯಾನ್ಸ್ ಫುಲ್ ಖುಷ್

Krishnaveni K
ಶನಿವಾರ, 18 ಮೇ 2024 (16:19 IST)
Photo Courtesy: Twitter
ಬೆಂಗಳೂರು: ಐಪಿಎಲ್ ನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಚಿನ್ನಸ್ವಾಮಿ ಮೈದಾನದಲ್ಲಿ ಮಹತ್ವದ ಪಂದ್ಯ ಲೀಗ್ ಪಂದ್ಯ ನಡೆಯಲಿದೆ.

ಈ ಪಂದ್ಯದಲ್ಲಿ 18 ಓವರ್ ಗಳಲ್ಲಿ ಅಥವಾ 18 ರನ್ ಗಳ ಅಂತರದಿಂದ ಗೆದ್ದರೆ ಮಾತ್ರ ಆರ್ ಸಿಬಿಗೆ ಪ್ಲೇ ಆಫ್ ಗೇರುವ ಅವಕಾಶ ಸಿಗಲಿದೆ. ಒಂದು ವೇಳೆ ಸಿಎಸ್ ಕೆ ಸೋತರೆ ಟೂರ್ನಿಯಿಂದ ಹೊರಹೋಗಬೇಕಾಗುತ್ತದೆ. ಮಳೆಯಿಂದ ಪಂದ್ಯ ರದ್ದಾದರೆ ಅಥವಾ ಸಿಎಸ್ ಕೆ ಪಂದ್ಯ ಗೆದ್ದರೆ ಆರ್ ಸಿಬಿ ಟೂರ್ನಿಯಿಂದ ಹೊರಬೀಳಲಿದೆ.

ಹೀಗಾಗಿ ಈ ಪಂದ್ಯಕ್ಕೆ ಫೈನಲ್ ಪಂದ್ಯದ ಕಳೆ ಬಂದಿದೆ. ಆದರೆ ಇದರ ನಡುವೆ ಅಭಿಮಾನಿಗಳಿಗೆ ಇಂದಿನ ಪಂದ್ಯಕ್ಕೆ ಮಳೆ ಬಂದರೆ ಎಂಬ ಭೀತಿ ಶುರುವಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಹೀಗಾಗಿ ಇಂದಿನ ಪಂದ್ಯಕ್ಕೆ ಮಳೆ ಬಂದರೆ ಎಂಬ ಭೀತಿಯಿದೆ.

ಆದರೆ ಇಂದು ಅಭಿಮಾನಿಗಳ ಅದೃಷ್ಟವೋ, ತಂಡದ ಅದೃಷ್ಟವೋ ಬೆಳಗ್ಗಿನಿಂದ ಕೆಲವೊಮ್ಮೆ ಮಾತ್ರ ಮೋಡ ಕವಿದ ವಾತಾವರಣ ಬಿಟ್ಟರೆ ಬಿಸಿಲಿನ ವಾತಾವರಣವಿದೆ. ಇಂದಿನ ಹವಾಮಾನ ವರದಿ ಪ್ರಕಾರ ಮಳೆ ಬರಬಹುದು ಎಂದಿತ್ತು. ಆದರೆ ಮಹತ್ವದ ಪಂದ್ಯಕ್ಕೆ ಇಂದು ವರುಣನೂ ಅವಕಾಶ ಮಾಡಿಕೊಡುವ ಲಕ್ಷಣ ಕಾಣುತ್ತಿದೆ. ಚಿನ್ನಸ್ವಾಮಿ ಮೈದಾನದ ಬಳಿ ಮೋಡ ಕೂಡಾ ಚದುರಿದ್ದು ಆಕಾಶ‍ ನಿರ್ಮಲವಾಗಿದೆ. ಹೀಗಾಗಿ ಇಂದು ಪಂದ್ಯ ನಡೆಯುವುದು ಖಚಿತ ಎಂದು ಅಭಿಮಾನಿಗಳು ಖುಷಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments