ಐಪಿಎಲ್ 2024: ಸಿಎಸ್ ಕೆ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿಗೆ ಮಳೆಯದ್ದೇ ಭಯ

Krishnaveni K
ಬುಧವಾರ, 15 ಮೇ 2024 (08:51 IST)
ಬೆಂಗಳೂರು: ಮೇ 18 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಮಹತ್ವದ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಆರ್ ಸಿಬಿಗೆ ಮಳೆಯ ಭಯ ಶುರುವಾಗಿದೆ.

ಇದು ಆರ್ ಸಿಬಿ ಮತ್ತು ಚೆನ್ನೈ ಪಾಲಿಗೆ ಕೊನೆಯ ಲೀಗ್ ಪಂದ್ಯವಾಗಿದೆ. ಈ ಪಂದ್ಯದಲ್ಲಿ ರನ್ ರೇಟ್ ಕಾಯ್ದುಕೊಂಡು ಗೆದ್ದರೆ ಮಾತ್ರ ಆರ್ ಸಿಬಿಗೆ ಪ್ಲೇ ಆಫ್ ಗೇರುವ ಅವಕಾಶ ಸಿಗಲಿದೆ. ಒಂದು ವೇಳೆ ಮಳೆ ಬಂದು ಪಂದ್ಯ ರದ್ದಾದರೆ ಅಥವಾ ಸೋತರೆ ಟೂರ್ನಿಯಿಂದಲೇ ಹೊರ ನಡೆಯಬೇಕಾಗುತ್ತದೆ.

ಆರಂಭಿಕ ಪಂದ್ಯಗಳಲ್ಲಿ ಸೋಲುತ್ತಾ ಬಂದ ಆರ್ ಸಿಬಿ ಇದೀಗ ಫೀನಿಕ್ಸ್ ನಂತೆ ಎದ್ದು ನಿಂತು ಸತತ ಐದು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದೇ ರೋಚಕವಾಗಿತ್ತು. ಇದೇ ಉತ್ಸಾಹದಲ್ಲಿ ಕೊನೆಯ ಲೀಗ್ ಪಂದ್ಯವನ್ನೂ ಗೆದ್ದು ಆರ್ ಸಿಬಿ ಪ್ಲೇ ಆಫ್ ಗೇರುವ ಸಾಧನೆ ಮಾಡುವ ಹುಮ್ಮಸ್ಸಿನಲ್ಲಿದೆ.

ಇದಕ್ಕಾಗಿ ಈ ಪಂದ್ಯವನ್ನು ಆರ್ ಸಿಬಿ 18 ರನ್ ಗಳ ಅಂತರ ಅಥವಾ 18 ಓವರ್ ಗಳಲ್ಲಿ ಪಂದ್ಯ ಗೆದ್ದರೆ ಸಾಕು. ಇದು ತವರು ಬೆಂಗಳೂರಿನಲ್ಲಿ ನಡೆಯುವ ಪಂದ್ಯವಾಗಿರುವುದರಿಂದ ಆರ್ ಸಿಬಿಗೆ ಒಳ್ಳೆಯ ಅವಕಾಶವಿತ್ತು. ಆದರೆ ಶನಿವಾರದಂದು ಬೆಂಗಳೂರಿನಲ್ಲಿ ಶೇ.90 ರಷ್ಟು ಮಳೆ ಬರುವ ಸಾಧ‍್ಯತೆಯಿದೆ ಎಂದು ಹವಾಮಾನ ವರದಿ ಹೇಳುತ್ತಿದೆ. ಅದರಲ್ಲೂ ಅಪರಾಹ್ನದ ನಂತರ ರಾತ್ರಿ 9 ರವರೆಗೆ ಮಳೆಯಾಗುವ ಸಾಧ‍್ಯತೆಯಿದೆ ಎಂದು ಸೂಚಿಸುತ್ತಿದೆ. ಮಳೆ ಬಂದರೆ ಆರ್ ಸಿಬಿ ಕನಸಿಗೆ ತಣ್ಣೀರೆರಚಿದಂತಾಗಲಿದೆ. ಹೀಗಾಗಿ ಇಷ್ಟು ದಿನ ಮಳೆ ಬಂದರೆ ಸಾಕು ಎಂದು ಪ್ರಾರ್ಥಿಸುತ್ತಿದ್ದ ಅಭಿಮಾನಿಗಳು ಈಗ ಮಳೆ ಬಾರದೇ ಇದ್ದರೆ ಸಾಕು ಎಂದು ಪ್ರಾರ್ಥಿಸುವಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೊಹಮ್ಮದ್ ಶಮಿಗೆ ಸುಪ್ರೀಂ ನೋಟಿಸ್: ವೃತ್ತಿ ಜೀವನದ ಬಳಿಕ ವೈಯಕ್ತಿಕ ಜೀವನದಲ್ಲೂ ಸಂಕಷ್ಟ

ಏನಾದ್ರೂ ಆಗಲಿ ಅಹಮ್ಮದಾಬಾದ್ ನಲ್ಲಿ ಮಾತ್ರ ಟಿ20 ವಿಶ್ವಕಪ್ ಫೈನಲ್ ಬೇಡ ಅಂತಿದ್ದಾರೆ ಫ್ಯಾನ್ಸ್

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ಟೀಂ ಇಂಡಿಯಾಗೆ ಸರಣಿ ಮುನ್ನಡೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಗಿಫ್ಟ್ ಕೊಟ್ಟ ಮಹಿಳಾ ಕ್ರಿಕೆಟಿಗರು video

ಮುಂದಿನ ಸುದ್ದಿ
Show comments