ಐಪಿಎಲ್ 2024: ರಚಿನ್ ರವೀಂದ್ರರನ್ನು ಖರೀದಿಸದೆ ತಪ್ಪು ಮಾಡಿತಾ ಆರ್ ಸಿಬಿ

Krishnaveni K
ಬುಧವಾರ, 27 ಮಾರ್ಚ್ 2024 (12:05 IST)
Photo Courtesy: Twitter
ಚೆನ್ನೈ: ಐಪಿಎಲ್ 2024 ಮಿನಿ ಹರಾಜಿನಲ್ಲಿ ರಚಿನ್ ರವೀಂದ್ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಬಹುದು ಎಂದು ಎಲ್ಲರ ಲೆಕ್ಕಾಚಾರವಾಗಿತ್ತು. ಸ್ವತಃ ರಚಿನ್ ಗೆ ಬೆಂಗಳೂರು ತಂಡ ಸೇರುವ ಆಸೆಯಿತ್ತು.

ಆದರೆ ಆರ್ ಸಿಬಿ ಭಾರತೀಯ ಮೂಲದ ನ್ಯೂಜಿಲೆಂಡ್ ಕ್ರಿಕೆಟಿಗನನ್ನು ಖರೀದಿಸಲೇ ಇಲ್ಲ. ಕೊನೆಗೆ ರಚಿನ್ ಚೆನ್ನೈ ತಂಡದ ಪಾಲಾದರು. ಆದರೆ ಇದೀಗ ಚೆನ್ನೈ ಪರ ರಚಿನ್ ಬೀಡು ಬೀಸಾದ ಬ್ಯಾಟಿಂಗ್ ಮಾಡುತ್ತಿರುವುದನ್ನು ನೋಡಿದರೆ ಆರ್ ಸಿಬಿ ತಪ್ಪು ಮಾಡಿತಾ ಎಂಬ ಅನುಮಾನ ಅಭಿಮಾನಿಗಳನ್ನು ಕಾಡಲು ಆರಂಭಿಸಿದೆ.

ಚೆನ್ನೈ ಪರ ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ಮತ್ತು ನಿನ್ನೆ ಗುಜರಾತ್ ವಿರುದ್ಧದ ಪಂದ್ಯದಲ್ಲಿ ರಚಿನ್ ಅಬ್ಬರದ ಆರಂಭ ನೀಡಿದ್ದಾರೆ. ಎರಡೂ ಪಂದ್ಯಗಳಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಅವರು ಚೆನ್ನೈ ರನ್ ಗತಿಯನ್ನು ಆರಂಭದಲ್ಲೇ ಏರಿಸಿದ್ದಾರೆ. ಇದನ್ನು ನೋಡಿ ಸಿಎಸ್ ಕೆಗೆ ರಚಿನ್ ಖರೀದಿಸಿದ್ದಕ್ಕೂ ಸಾರ್ಥಕವಾಯಿತು ಎನಿಸಿದೆ.

ಇತ್ತ ಆರ್ ಸಿಬಿಗೆ ಎರಡೂ ಪಂದ್ಯಗಳಲ್ಲಿ ಒಬ್ಬರು ಅಥವಾ ಇಬ್ಬರು ಬ್ಯಾಟಿಗರ ಕೊಡುಗೆಯಷ್ಟೇ ಕಂಡುಬಂದಿದೆ. ಹೀಗಾಗಿ ರಚಿನ್ ರಂತಹ ಪ್ರತಿಭಾವಂತ ಬ್ಯಾಟಿಗನ ಅವಶ್ಯಕತೆ ತಂಡಕ್ಕೆ ಅಗತ್ಯವಾಗಿತ್ತು. ಈಗ ಆರ್ ಸಿಬಿ ಅಭಿಮಾನಿಗಳೂ ರಚಿನ್ ರನ್ನು ಆಯ್ಕೆ ಮಾಡದೇ ಇದ್ದಿದ್ದಕ್ಕೆ ಫ್ರಾಂಚೈಸಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಜಯ್ ಶಾ ಎಂದ್ರೆ ಸುಮ್ನೇ ಅಲ್ಲ, ಮಹಿಳಾ ಕ್ರಿಕೆಟ್ ತಾರೆಯರಿಗೆ ಇದಕ್ಕೇ ಜಯ್ ಶಾ ಮೆಲೆ ಪ್ರೀತಿ

ಪ್ರಧಾನಿ ಭೇಟಿಗೆ ಸಿದ್ಧರಾದ ಚಾಂಪಿಯನ್ ಭಾರತ ಮಹಿಳಾ ಕ್ರಿಕೆಟಿಗರು: ಮೋದಿಗೆ ಏನು ಗಿಫ್ಟ್ ಕೊಡಲಿದ್ದಾರೆ

ಹರ್ಮನ್ ಪ್ರೀತ್ ಕೌರ್ ಪಡೆಗಿಲ್ಲ ವಿಕ್ಟರಿ ಪೆರೇಡ್ ಭಾಗ್ಯ: ಇದಕ್ಕೆಲ್ಲಾ ಬೆಂಗಳೂರೇ ಕಾರಣ

ಮುಂದಿನ ಸುದ್ದಿ
Show comments