Webdunia - Bharat's app for daily news and videos

Install App

ಐಪಿಎಲ್ 2024: ಸಿಎಸ್ ಕೆ ವಿರುದ್ಧ ಗೆಲುವಿನ ಬಳಿಕ ಮೈಮರೆತು ಬೆಳಗಿನ ಜಾವದವರೆಗೆ ಆರ್ ಸಿಬಿ ಪಾರ್ಟಿ

Krishnaveni K
ಶುಕ್ರವಾರ, 24 ಮೇ 2024 (09:34 IST)
Photo Courtesy: Twitter
ಬೆಂಗಳೂರು: ಐಪಿಎಲ್ 2024 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೊನೆಯ ಲೀಗ್ ಪಂದ್ಯ ಗೆದ್ದ ಬಳಿಕ ಆರ್ ಸಿಬಿ ಆಟಗಾರರು ಎಷ್ಟು ಮೈಮರೆತಿದ್ದರೆಂದರೆ ಬೆಳಗಿನ ಜಾವದವರೆಗೂ ಪಾರ್ಟಿ ಮಾಡುತ್ತಿದ್ದರು ಎಂಬ ಅಂಶ ಈಗ ಬೆಳಕಿಗೆ ಬಂದಿದೆ.

ಕೊನೆಯ ಲೀಗ್ ಪಂದ್ಯವನ್ನು ಗೆದ್ದು ಪ್ಲೇ ಆಫ್ ಗೆ ಅರ್ಹತೆ ಪಡೆಯುತ್ತಿದ್ದಂತೇ ಆರ್ ಸಿಬಿ ಆಟಗಾರರು ಫೈನಲ್ ಗೆದ್ದಂತೆ ಕುಣಿದಾಡಿದ್ದರು. ಅವರ ಈ ಮಟ್ಟಿಗಿನ ಸಂಭ್ರಮಾಚರಣೆ ಟೀಕೆಗೆ ಗುರಿಯಾಗಿತ್ತು. ಆದರೆ ಆರ್ ಸಿಬಿ ಆಟಗಾರರ ಸಂಭ್ರಮಾಚರಣೆ ಕೇವಲ ಮೈದಾನದಲ್ಲಿ ಮಾತ್ರವಲ್ಲ, ಹೊರಗೆಯೂ ಮುಂದುವರಿದಿತ್ತು ಎನ್ನಲಾಗಿದೆ.

ಆರ್ ಸಿಬಿ ಬೌಲರ್ ಯಶ್ ದಯಾಳ್ ತಂದೆ ಈ ವಿಚಾರವನ್ನು ಹೊರಹಾಕಿದ್ದಾರೆ. ಚೆನ್ನೈ ಸೋಲಿಸಿದ ಬಳಿಕ ಆರ್ ಸಿಬಿ ಆಟಗಾರರು ಭಾರೀ ಸಂತೋಷದಲ್ಲಿದ್ದರು. ಬೆಳಗಿನ ಜಾವ 5 ಗಂಟೆಯವರೆಗೂ ಪಾರ್ಟಿ ಮಾಡಿ ಸಂತೋಷಪಟ್ಟರು ಎಂದು ಹೇಳಿದ್ದಾರೆ.

ಆದರೆ ಅವರ ಈ ಹೇಳಿಕೆಯೇ ಈಗ ಆರ್ ಸಿಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಆ ರೀತಿ ಮೈಮರೆತಿದ್ದಕ್ಕೇ ಮುಂದಿನ ಪಂದ್ಯದಲ್ಲಿ ಸೋತು ಕೂಟದಿಂದ ನಿರ್ಗಮಿಸುವ ಪರಿಸ್ಥಿತಿ ಬಂದಿದೆ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ. ಇದಾದ ಬಳಿಕ ರಾಜಸ್ಥಾನ್ ರಾಯಲ್ಸ್ ವಿರುದ್ಧ ಅಹಮ್ಮದಾಬಾದ್ ನಲ್ಲಿ ನಡೆದ ಪ್ಲೇ ಆಫ್ ಪಂದ್ಯದಲ್ಲಿ ಆರ್ ಸಿಬಿ ಸೋಲು ಅನುಭವಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

IND vs ENG: ಆಕಾಶ್ ದೀಪ್ ಫಿಫ್ಟಿ ಹೊಡೆದಿದ್ದಕ್ಕೆ ಹೆಲ್ಮೆಟ್ ತೆಗಿ ಎಂದು ಸಿಗ್ನಲ್ ಕೊಟ್ಟ ಶುಭಮನ್ ಗಿಲ್

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

ಮುಂದಿನ ಸುದ್ದಿ
Show comments