Webdunia - Bharat's app for daily news and videos

Install App

ಐಪಿಎಲ್ 2024: ಗ್ರೀನ್ ಜೆರ್ಸಿಯಲ್ಲಾದರೂ ಇಂದು ಆರ್ ಸಿಬಿ ಲಕ್ ಬದಲಾಗುತ್ತಾ

Krishnaveni K
ಭಾನುವಾರ, 21 ಏಪ್ರಿಲ್ 2024 (09:24 IST)
Photo Courtesy: Twitter
ಕೋಲ್ಕೊತ್ತಾ: ಐಪಿಎಲ್ 2024 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಕೋಲ್ಕೊತ್ತಾದ ಈಡನ್ ಗಾರ್ಡನ್ ನಲ್ಲಿ ನಡೆಯಲಿದೆ.

ವಿಶೇಷವೆಂದರೆ ಆರ್ ಸಿಬಿ ಇಂದು ಹಸಿರು ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ.  ಪ್ರತೀ ಐಪಿಎಲ್ ಪಂದ್ಯಾವಳಿಯಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಆರ್ ಸಿಬಿ ಒಂದು ಪಂದ್ಯದಲ್ಲಿ ಗ್ರೀನ್ ಜೆರ್ಸಿ ತೊಟ್ಟು ಪಂದ್ಯವಾಡುತ್ತದೆ. ಇಂದು ಅದೇ ರೀತಿ ಗ್ರೀನ್ ಜೆರ್ಸಿಯಲ್ಲಿ ಆಡಲಿದೆ.

ಇನ್ನು ಈ ಐಪಿಎಲ್ ಟೂರ್ನಿಯಲ್ಲಿ ಆರ್ ಸಿಬಿ ಸ್ಥಿತಿ ಶೋಚನೀಯವಾಗಿದೆ. ಕಳೆದ 7 ಪಂದ್ಯಗಳಿಂದ ಗೆದ್ದಿದ್ದು ಕೇವಲ 1 ಪಂದ್ಯದಲ್ಲಿ ಮಾತ್ರ. ಅದರಲ್ಲೂ ಕಳೆದ ಐದು ಪಂದ್ಯಗಳಲ್ಲಿ ಸತತವಾಗಿ ಸೋಲು ಕಂಡಿದೆ. ಇದರಿಂದ ಆರ್ ಸಿಬಿ ಫ್ಯಾನ್ಸ್ ಕೂಡಾ ತಂಡದ ಮೇಲೆ ಆಕ್ರೋಶಗೊಂಡಿದ್ದಾರೆ. ಈ ಟೂರ್ನಿಯಲ್ಲಿ ಆರ್ ಸಿಬಿ ಬೌಲಿಂಗ್ ಸಂಪೂರ್ಣ ಹಳಿ ತಪ್ಪಿದೆ. ಬ್ಯಾಟಿಂಗ್ ಕೆಲವೊಮ್ಮೆ ಕ್ಲಿಕ್ ಆದರೆ ಮತ್ತೆ ಕೆಲವೊಮ್ಮೆ ಮಕಾಡೆ ಮಲಗಿದೆ.

ಆರ್ ಸಿಬಿ ಪರ ಈ ಬಾರಿ ಕೊಂಚವಾದರೂ ಭರವಸೆ ಮೂಡಿಸಿದವರೆಂದರೆ ದಿನೇಶ್ ಕಾರ್ತಿಕ್ ಮತ್ತು ವಿರಾಟ್ ಕೊಹ್ಲಿ. ಕೊಹ್ಲಿ ನಿಧಾನಗತಿಯ ರನ್ ಗಳಿಸುತ್ತಾರೆಂಬ ಟೀಕೆ ಎದುರಿಸಿದರೂ ಒಂದು ಶತಕ ಸಿಡಿಸಿದ್ದಾರೆ. ಆದರೆ ದಿನೇಶ್ ಕಾರ್ತಿಕ್ ಆರ್ ಸಿಬಿ ಅಭಿಮಾನಿಗಳ ಮನಗೆದ್ದಿದ್ದಾರೆ. ಇಷ್ಟರವರೆಗೆ ಆಡಿದ ಎಲ್ಲಾ ಪಂದ್ಯಗಳಲ್ಲೂ ಸಿಡಿಲಿನ ಬ್ಯಾಟಿಂಗ್ ನಡೆಸಿದ್ದಾರೆ. ಆದರೆ ಅವರಿಗೆ ತಕ್ಕ ಸಾಥ್ ಸಿಗದೇ ಪಂದ್ಯವನ್ನು ಯಶಸ್ವಿಯಾಗಿ ಮುಗಿಸಲು ಸಾಧ್ಯವಾಗಿರಲಿಲ್ಲ.

ಇತ್ತ ಕೆಕೆಆರ್ 6 ಪಂದ್ಯಗಳಿಂದ 4 ರಲ್ಲಿ ಗೆಲುವು ಕಂಡು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಹೋರಾಡಿ ಸೋತಿದ್ದ ಕೆಕೆಆರ್ ಇಂದು ಮತ್ತೆ ಗೆಲುವಿನ ಹಳಿಗೆ ಮರಳುವ ವಿಶ್ವಾಸದಲ್ಲಿದೆ. ಕೆಕೆಆರ್ ಗಿಂತ ಆರ್ ಸಿಬಿಗೆ ಇಂದು ಗೆಲ್ಲುವುದು ಅನಿವಾರ್ಯವಾಗಿದೆ. ಇಂದು ಸೋತರೆ ಅಧಿಕೃತವಾಗಿ ಟೂರ್ನಿಯಿಂದ ಹೊರಬಿದ್ದಂತೇ ಲೆಕ್ಕ. ಈ ಪಂದ್ಯ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

ಮುಂದಿನ ಸುದ್ದಿ
Show comments