ಐಪಿಎಲ್ 2024: ಕೆಎಲ್ ರಾಹುಲ್ ಟಾಸ್ ಗೆ ಅಲಭ್ಯರಾಗಲು ಕಾರಣ ನೀಡಿದ ನಿಕಲಸ್ ಪೂರನ್

Krishnaveni K
ಭಾನುವಾರ, 31 ಮಾರ್ಚ್ 2024 (08:45 IST)
ಲಕ್ನೋ: ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಟಾಸ್ ಗೆ ಬರದೇ ಇದ್ದಾಗ ಎಲ್ಲರಿಗೂ ಆತಂಕವಾಗಿತ್ತು. ಅದಕ್ಕೆ ಕಾರಣವೆನೆಂದು ನಿಕಲಸ್ ಪೂರನ್ ಹೇಳಿದ್ದಾರೆ.

ಟಾಸ್ ಸಂದರ್ಭದಲ್ಲಿ ಸಾಮಾನ್ಯವಾಗಿ ತಂಡದ ನಾಯಕರು ಉಪಸ್ಥಿತರಿರಬೇಕು. ಆದರೆ ಕೆಎಲ್ ರಾಹುಲ್ ಗೈರಾಗಿದ್ದರು. ಹೀಗಾಗಿ ಅವರಿಗೆ ಮತ್ತೆ ಗಾಯವಾಯಿತೇ ಎಂದು ಎಲ್ಲರಿಗೂ ಅಚ್ಚರಿಯಾಯಿತು. ಯಾಕೆಂದರೆ ರಾಹುಲ್ ಈಗಷ್ಟೇ ಫಿಟ್ನೆಸ್ ಸರ್ಟಿಫಿಕೇಟ್ ಪಡೆದು ಕ್ರಿಕೆಟ್ ಗೆ ಮರಳಿದ್ದರು.

ಮುಂಬರುವ ಟಿ20 ವಿಶ್ವಕಪ್ ದೃಷ್ಟಿಯಿಂದ ರಾಹುಲ್ ಫಿಟ್ ಆಗಿರುವುದು ಮುಖ್ಯವಾಗಿದೆ. ಈ ಐಪಿಎಲ್ ನಲ್ಲಿ ಅವರು ಕೀಪಿಂಗ್ ಮಾಡುವುದು ಅನುಮಾನ ಎನ್ನಲಾಗಿತ್ತು. ಹಾಗಿದ್ದರೂ ಕಳೆದ ಪಂದ್ಯದಲ್ಲಿ ಕೀಪಿಂಗ್ ಮಾಡಿದ್ದರು. ಹೀಗಾಗಿ ರಿಸ್ಕ್ ತೆಗೆದುಕೊಂಡು ಗಾಯ ಮಾಡಿಕೊಂಡರೇ ಎಂದು ಎಲ್ಲರಿಗೂ ಅನುಮಾನವಾಗಿತ್ತು.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ನಿಕಲಸ್ ಪೂರನ್ ‘ರಾಹುಲ್ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡುತ್ತಾರೆ. ಅವರು ಈಗಷ್ಟೇ ಗಾಯದಿಂದ ಚೇತರಿಸಿಕೊಂಡು ಮರಳಿದ್ದಾರೆ. ಮುಂದೆ ಟೂರ್ನಮೆಂಟ್ ಸುದೀರ್ಘ ಅವಧಿಯದ್ದಾಗಿದೆ. ಹೀಗಾಗಿ ರಿಸ್ಕ್ ಬೇಡವೆಂದು ಇಂಪ್ಯಾಕ್ಟ್ ಪ್ಲೇಯರ್ ಆಗಿದ್ದಾರೆ’ ಎಂದಿದ್ದಾರೆ. ಹೀಗಾಗಿ ಈ ಐಪಿಎಲ್ ನಲ್ಲಿ ರಾಹುಲ್ ರಿಸ್ಕ್ ತೆಗೆದುಕೊಂಡು ಆಡುತ್ತಿದ್ದಾರೆಯೇ ಎಂಬ ಅನುಮಾನ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಮುಂದಿನ ಸುದ್ದಿ
Show comments