Webdunia - Bharat's app for daily news and videos

Install App

IPL 2025 RCB: 12 ವರ್ಷದ ಬಳಿಕ ಆರ್ ಸಿಬಿಗೆ ಬಂದ ಅಪ್ಪಟ ಕನ್ನಡಿಗ ಆಟಗಾರ

Krishnaveni K
ಗುರುವಾರ, 8 ಮೇ 2025 (10:36 IST)
Photo Credit: X
ಬೆಂಗಳೂರು: ಐಪಿಎಲ್ 2025 ರಲ್ಲಿ ಆರ್ ಸಿಬಿ ತಂಡದ ದೇವದತ್ತ್ ಪಡಿಕ್ಕಲ್ ಗಾಯದಿಂದಾಗಿ ಕೂಟದಿಂದಲೇ ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ಅಪ್ಪಟ ಕನ್ನಡಿಗ ಆಟಗಾರ ಬರೋಬ್ಬರಿ 12 ವರ್ಷಗಳ ಬಳಿಕ ಆರ್ ಸಿಬಿಗೆ ಬಂದಿದ್ದಾರೆ.

ಕನ್ನಡಿಗ ಆಟಗಾರ ದೇವದತ್ತ್ ಪಡಿಕ್ಕಲ್ ಜಾಗಕ್ಕೆ ಕನ್ನಡಿಗರೇ ಆದ ಮಯಾಂಕ್ ಅಗರ್ವಾಲ್ ಬಂದಿದ್ದಾರೆ. 2011 ರಲ್ಲಿ ಮಯಾಂಕ್ ಮೊದಲ ಬಾರಿಗೆ ಐಪಿಎಲ್ ಆಡಿದ್ದು ಆರ್ ಸಿಬಿ ಪರ. ಇದಾದ ಬಳಿಕ ಅವರು ಒಟ್ಟು ಮೂರು ಸೀಸನ್ ಆರ್ ಸಿಬಿ ಪರ ಆಡಿದ್ದರು.

2013 ರಲ್ಲಿ ಅವರು ಹೇಳಿಕೊಳ್ಳುವ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು. ಇದಾದ ಬಳಿಕ ಮಯಾಂಕ್ ಪುಣೆ, ಪಂಜಾಬ್ ಕಿಂಗ್ಸ್  ಪರ ಐಪಿಎಲ್ ಆಡಿದ್ದರು. ಕಳೆದ ಸೀಸನ್ ವರೆಗೂ ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಆಡಿದ್ದರು. ಈ ಬಾರಿ ಮೆಗಾ ಹರಾಜಿನಲ್ಲಿ ಯಾವುದೇ ತಂಡ ಅವರನ್ನು ಖರೀದಿಸಿರಲಿಲ್ಲ.

ಆದರೆ ಈಗ ಗಾಯಗೊಂಡಿರುವ ದೇವದತ್ತ್ ಪಡಿಕ್ಕಲ್ ಸ್ಥಾನಕ್ಕೆ ಆರ್ ಸಿಬಿ ಮಯಾಂಕ್ ಅಗರ್ವಾಲ್ ರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಇದೂ ಬರೋಬ್ಬರಿ 12 ವರ್ಷಗಳ ಬಳಿಕ ಕನ್ನಡಿಗ ಆಟಗಾರನ ರಿ ಎಂಟ್ರಿ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Rohit Sharma: ಸದ್ದು ಗದ್ದಲವಿಲ್ಲದೇ ರೋಹಿತ್ ಶರ್ಮಾ ನಿವೃತ್ತಿಯಾಗಿದ್ದರ ಹಿಂದಿದೆ ಕಾರಣ

IPL 2025: ಈಡನ್‌ನಲ್ಲಿ ಕೊನೆಯ ಪಂದ್ಯದಲ್ಲಿ ಮಿಂಚಿದ ಧೋನಿ: ಕೋಲ್ಕತ್ತ ವಿರುದ್ಧ ಚೆನ್ನೈ ತಂಡಕ್ಕೆ ರೋಚಕ ಜಯ

Operation Sindoor: ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ: ಧರ್ಮಶಾಲಾದ ಐಪಿಎಲ್‌ ಪಂದ್ಯ ಮುಂಬೈಗೆ ಸ್ಥಳಾಂತರ

Rohit Sharma Retirement: ನಾಯಕತ್ವದಿಂದ ಕೆಳಗಿಳಿಸಿದ ಬೆನ್ನಲ್ಲೇ ಟೆಸ್ಟ್‌ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ ರೋಹಿತ್ ಶರ್ಮಾ

Virat Kohli: ವಿರಾಟ್ ಕೊಹ್ಲಿ ಕಟೌಟ್ ಮುಂದೆ ಕುರಿ ಕಡಿದ ಫ್ಯಾನ್ಸ್ ಅರೆಸ್ಟ್

ಮುಂದಿನ ಸುದ್ದಿ
Show comments