Webdunia - Bharat's app for daily news and videos

Install App

IPL 2025: ಆರ್ ಸಿಬಿ ಮ್ಯಾಚ್ ಸೋತಿದ್ದಕ್ಕೆ ಸಿದ್ದರಾಮಯ್ಯನೇ ಕಾರಣ: ಹೇಗೆ ಅಂತೀರಾ

Krishnaveni K
ಶುಕ್ರವಾರ, 11 ಏಪ್ರಿಲ್ 2025 (13:59 IST)
ಬೆಂಗಳೂರು: ಐಪಿಎಲ್ 2025 ರಲ್ಲಿ ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯ ಸೋತ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ಸೋಲಿಗೆ ಸಿಎಂ ಸಿದ್ದರಾಮಯ್ಯನೇ ಕಾರಣ ಅಂತಿದ್ದಾರೆ. ಅದು ಹೇಗೆ ಅಂತೀರಾ?

ನಿನ್ನೆ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯ ವೀಕ್ಷಣೆ ಸಿಎಂ ಸಿದ್ದರಾಮಯ್ಯ ಕೂಡಾ ಬಂದಿದ್ದರು. ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆ ವಿಐಪಿ ಸೀಟ್ ನಲ್ಲಿ ಕುಳಿತು ಸಿದ್ದರಾಮಯ್ಯ ಐಪಿಎಲ್ ಪಂದ್ಯ ವೀಕ್ಷಣೆ ಮಾಡಿದ್ದಾರೆ.

ಈ ವಿಡಿಯೋಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದು, ಪ್ರೇಕ್ಷಕರ ಜೊತೆ ಸೇರಿ ಆರ್ ಸಿಬಿ ಪಂದ್ಯ ವೀಕ್ಷಿಸಿ ಅವರಿಗೆ ಪ್ರೋತ್ಸಾಹಿಸಿದೆ. ಆರ್ ಸಿಬಿ ಒಂದು ಸಮತೋಲಿತ ತಂಡವಾಗಿದ್ದು, ಈ ಬಾರಿ ಕಪ್ ಗೆಲ್ಲಬಹುದು ಎಂಬ ವಿಶ್ವಾಸವಿದೆ ಎಂದು ಬರೆದುಕೊಂಡಿದ್ದರು.

ನಿನ್ನೆ ಸೋಲಿನ ಬಳಿಕ ಹಲವರು ಸಿಎಂ ಟ್ವೀಟ್ ಗೆ ಪ್ರತಿಕ್ರಿಯಿಸಿದ್ದು ‘ಈಗ ಗೊತ್ತಾಯ್ತು ಆರ್ ಸಿಬಿ ಯಾಕೆ ಸೋತಿದ್ದು ಅಂತ’ ಎಂದು ಕಿಡಿ ಕಾರಿದ್ದಾರೆ. ಸ್ವಾಮಿ ನೀವು ಯಾಕೆ ಹೋದ್ರಿ ಅದಕ್ಕೇ ಮ್ಯಾಚ್ ಸೋತೆವು ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ. ಈ ಹಿಂದೆ ಏಕದಿನ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಪ್ರಧಾನಿ ಮೋದಿ ಹೋಗಿದ್ದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಬೆಂಬಲಿಗರು ಮೋದಿ ಅದೃಷ್ಟಹೀನ. ಅದಕ್ಕೇ ಪಂದ್ಯ ಸೋತೆವು ಎಂದಿದ್ದರು. ಇದೀಗ ಅದನ್ನೇ ಕೆಲವರು ಸಿದ್ದರಾಮಯ್ಯಗೆ ತಿರುಗುಬಾಣ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments