Publish Date: Wed, 06 May 2026 (13:02 IST)
Updated Date: Wed, 06 May 2026 (13:05 IST)
ಬೆಂಗಳೂರು: ಐಪಿಎಲ್ 2026 ರ ಫೈನಲ್ ಪಂದ್ಯ ಈ ಬಾರಿ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲ್ಲ ಎನ್ನಲಾಗುತ್ತಿದೆ. ಇದಕ್ಕೆ ಕರ್ನಾಟಕದ ಶಾಸಕರು, ಸಚಿವರೇ ಮೂಲ ಕಾರಣ ಎಂಬ ಸುದ್ದಿಹಬ್ಬಿದೆ.
ಚಿನ್ನಸ್ವಾಮಿ ಮೈದಾನದಲ್ಲಿ ಈ ಬಾರಿ ಉದ್ಘಾಟನಾ ಪಂದ್ಯ ನಡೆದಿತ್ತು. ಸಾಮಾನ್ಯವಾಗಿ ಹಾಲಿ ಚಾಂಪಿಯನ್ ತವರು ಮೈದಾನದಲ್ಲೇ ಫೈನಲ್ ಪಂದ್ಯವೂ ನಡೆಯುತ್ತದೆ. ಅದರಂತೆ ಈ ಬಾರಿ ಚಿನ್ನಸ್ವಾಮಿಯಲ್ಲಿ ಫೈನಲ್ ನೋಡಬಹುದು ಎಂದು ಅಭಿಮಾನಿಗಳು ಕಾದಿದ್ದರು.
ಆದರೆ ಅವರಿಗೆ ನಿರಾಸೆಯಾಗುವ ಸಾಧ್ಯತೆಯಿದೆ. ಈ ಬಾರಿ ಚಿನ್ನಸ್ವಾಮಿ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಇದಕ್ಕೆ ವಿಐಪಿ ಟಿಕೆಟ್ ಗೆ ಬೇಡಿಕೆಯಿಡುತ್ತಿರುವ ಶಾಸಕರು, ಸಚಿವರೇ ಕಾರಣ ಎನ್ನಲಾಗಿದೆ.
ಈಗಾಗಲೇ ಸಚಿವರು ಶಾಸಕರಿಗೆ ತಲಾ 2 ಉಚಿತ ಟಿಕೆಟ್ ನೀಡಲಾಗುತ್ತಿದೆ. ಆದರೆ 4-5 ಟಿಕೆಟ್ ನೀಡುವಂತೆ ಒತ್ತಡ ಕೇಳಿಬರುತ್ತಿದೆ. ಫೈನಲ್ ಪಂದ್ಯದ ಟಿಕೆಟ್ ಗೆ ಮತ್ತಷ್ಟು ಬೇಡಿಕೆಯಿರಲಿದೆ. ಇದರಿಂದ ಬೇಸತ್ತು ಬಿಸಿಸಿಐ ಫೈನಲ್ ಪಂದ್ಯವನ್ನೇ ಬೇರೆಡೆಗೆ ಸ್ಥಳಾಂತರಿಸುವ ಯೋಚನೆ ಮಾಡುತ್ತಿದೆ. ಇದು ಕ್ರಿಕೆಟ್ ಅಭಿಮಾನಿಗಳಿಗೆ ಬೇಸರ ತರಲಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ