Webdunia - Bharat's app for daily news and videos

Install App

ಐಪಿಎಲ್: ಆಂಡ್ರೆ ರಸೆಲ್ ಬಿರುಗಾಳಿಗೆ ಸ್ಯಾಮ್ ಬಿಲ್ಲಿಂಗ್ ಸುನಾಮಿ ಏಟು!

Webdunia
ಬುಧವಾರ, 11 ಏಪ್ರಿಲ್ 2018 (07:45 IST)
ಚೆನ್ನೈ: ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ರನ್ ಮಳೆಯೇ ಹರಿದಿದೆ. ಕೊನೆಗೆ ಚೆನ್ನೈ ತವರಿನಲ್ಲಿ ಮೊದಲ ಮತ್ತು ಈ ಕೂಟದ ಎರಡನೇ ಗೆಲುವು ದಾಖಲಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ನಿಗದಿತ 20 ಓವರ್ ಗಳಲ್ಲಿ ಭರ್ಜರಿ 202 ರನ್ ಮಾಡಿತು. ಆಂಡ್ರೆ ರಸೆಲ್ ಬಿರುಗಾಳಿಯಂತೆ ಬ್ಯಾಟ್ ಬೀಸಿದರು. ಕೇವಲ 36 ಎಸೆತಗಳಲ್ಲಿ 11 ಸಿಕ್ಸರ್, 1 ಬೌಂಡರಿ ನೆರವಿನಿಂದ 88 ರನ್ ಚಚ್ಚಿದರು. ರಸೆಲ್ ದಾಳಿಗೆ ಹೆಚ್ಚು ಚಚ್ಚಿಸಿಕೊಂಡವರು ಬ್ರಾವೋ. ಅವರ ಮೂರೇ ಓವರ್ ಗಳಲ್ಲಿ 50 ರನ್ ಹರಿದು ಬಂತು. ಉಳಿದ ಬ್ಯಾಟ್ಸ್ ಮನ್ ಗಳು ಯಾರೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ.

ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಚೆನ್ನೈಗೆ ಉತ್ತಮ ಆರಂಭ ದೊರಕಿತು. 5 ಓವರ್ ಗಳಾಗುವಷ್ಟರಲ್ಲಿ ಮೊತ್ತ 70 ದಾಟಿತ್ತು. ಶೇನ್ ವ್ಯಾಟ್ಸನ್ ಕೇವಲ 19 ಎಸೆತಗಳಲ್ಲಿ 42 ರನ್ ಸಿಡಿಸಿದರು. ಕೆಳ ಕ್ರಮಾಂಕದಲ್ಲಿ ಆಡಲು ಬಂದ ಸ್ಯಾಮ್ ಬಿಲ್ಲಿಂಗ್ಸ್ ರಸೆಲ್ ರಂತೇ ಬ್ಯಾಟ್ ಬೀಸಿದರು. ಕೇವಲ 23 ಎಸೆತಗಳಲ್ಲಿ 56 ರನ್ ಚಚ್ಚಿದರು. ಇದರಲ್ಲಿ 5 ಸಿಕ್ಸರ್ ಸೇರಿತ್ತು. ಅಂತಿಮವಾಗಿ ಚೆನ್ನೈ ಕೊನೆಯ ಎಸೆತ ಬಾಕಿ ಇರುವಂತೆ 5 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments